6:20 AM Friday21 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಹೊಸ ವರ್ಷ ಸ್ವಾಗತಕ್ಕೆ ಕಡಲನಗರಿ ಸಜ್ಜು: ಬೀಚ್ ಗಳಲ್ಲಿ ಜನಸಾಗರ, ಅಲ್ಲಲ್ಲಿ ವಿಶೇಷ ಕಾರ್ಯಕ್ರಮ, ದೇಗುಲ, ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ

31/12/2023, 22:08

ಮಂಗಳೂರು(reporterkarnataka.com): ಹೊಸ ವರ್ಷ 2024 ಬರಮಾಡಿಕೊಳ್ಳಲು ಕಡಲನಗರಿ ಮಂಗಳೂರು ಸಜ್ಜಾಗಿದೆ. ಜಾತಿ, ಧರ್ಮ, ಪ್ರಾಂತ್ಯ, ಭಾಷೆಯ ವೈರುಧ್ಯಗಳ ನಡುವೆ ತುಳುವರು ಹೊಸ ವರ್ಷಕ್ಕೆ ನಗುಮೊಗದಿಂದ ಸಿದ್ದರಾಗಿದ್ದಾರೆ.


ವರ್ಷದ ಕೊನೆಯ ದಿನ ಭಾನುವಾರ ಬಂದಿರುವುದರಿಂದ ಕರಾವಳಿಗರು ಫುಲ್ ಖುಷಿಯಲ್ಲಿದ್ದಾರೆ. ಜಿಲ್ಲೆಯ ಜನತೆ ಇಂದು ಬೆಳಗ್ಗೆಯೇ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕಟೀಲು, ಪೊಳಲಿ ಮುಂತಾದ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಎಲ್ಲ ದೇಗುಲಗಳು ಇಂದು ಬೆಳಗ್ಗಿನಿಂದಲೇ ರಶ್ ಇತ್ತು. ಕಡಲನಗರಿಯ ಶರವು, ಮಂಗಳಾದೇವಿ. ಕುದ್ರೋಳಿ ದೇಗುಲಗಳಿಗೆ ಸಾಕಷ್ಟು ಜನರು ಧಾವಿಸಿ ದೇವರಿಗೆ ನಮಿಸಿ ಬಂದಿದ್ದಾರೆ.
ಸಂಜೆ 4 ಗಂಟೆ ಕಳೆಯುತ್ತಿದ್ದಂತೆ ಮಂಗಳೂರಿನ ಪಣಂಬೂರು ಬೀಚ್, ತಣ್ಣೀರು ಬಾವಿ ಬೀಚ್, ಉಳ್ಳಾಲ ಸೋಮೇಶ್ವರ ಬೀಚ್, ಸುರತ್ಕಲ್ ಎನ್ ಐಟಿಕೆ ಬೀಚ್, ಸಸಿಹಿತ್ಲು ಬೀಚ್ ಪ್ರವಾಸಿಗರಿಂದ ಮತ್ತು ವಿಹಾರಾರ್ಥಿಗಳಿಂದ ತುಂಬಿತ್ತು. ಪಣಂಬೂರು ಬೀಚ್ ನಲ್ಲಿ ಜನರ ಖುಷಿ ಕಳೆಗಟ್ಟಿತ್ತು. ಗಾಳಿಪಟ ಹಾರಾಟ, ಬೆಲೂನ್ ಹಾರಾಟ ನಡೆಯಿತು.



ದೇಗುಲಗಳ ಜತೆ ಚರ್ಚ್ ಗಳಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ ನಡೆಯಿತು. ಮಂಗಳೂರಿನ ಮಿಲಾಗ್ರಿಸ್ ಚರ್ಚ್,ವೆಲೆಂನ್ಸಿಯ ದೇರೆಬೈಲ್ ಚರ್ಚ್, ರೊಸಾರಿಯೊ ಚರ್ಚ್, ಬಿಜೈ ಚರ್ಚ್, ಸೈಂಟ್ ಸೆಬಾಸ್ಟಿಯನ್ ಚರ್ಚ್ ಸೇರಿದಂತೆ ಎಲ್ಲ ಚರ್ಚ್ ಗಳಲ್ಲಿ ಹೊಸ ವರ್ಷದ ಪ್ರಯುಕ್ತ ವಿಶೇಷ ಪ್ರಾರ್ಥನೆ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು