3:04 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಹೊಸ ವರ್ಷ ಸ್ವಾಗತಕ್ಕೆ ಕಡಲನಗರಿ ಸಜ್ಜು: ಬೀಚ್ ಗಳಲ್ಲಿ ಜನಸಾಗರ, ಅಲ್ಲಲ್ಲಿ ವಿಶೇಷ ಕಾರ್ಯಕ್ರಮ, ದೇಗುಲ, ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ

31/12/2023, 22:08

ಮಂಗಳೂರು(reporterkarnataka.com): ಹೊಸ ವರ್ಷ 2024 ಬರಮಾಡಿಕೊಳ್ಳಲು ಕಡಲನಗರಿ ಮಂಗಳೂರು ಸಜ್ಜಾಗಿದೆ. ಜಾತಿ, ಧರ್ಮ, ಪ್ರಾಂತ್ಯ, ಭಾಷೆಯ ವೈರುಧ್ಯಗಳ ನಡುವೆ ತುಳುವರು ಹೊಸ ವರ್ಷಕ್ಕೆ ನಗುಮೊಗದಿಂದ ಸಿದ್ದರಾಗಿದ್ದಾರೆ.


ವರ್ಷದ ಕೊನೆಯ ದಿನ ಭಾನುವಾರ ಬಂದಿರುವುದರಿಂದ ಕರಾವಳಿಗರು ಫುಲ್ ಖುಷಿಯಲ್ಲಿದ್ದಾರೆ. ಜಿಲ್ಲೆಯ ಜನತೆ ಇಂದು ಬೆಳಗ್ಗೆಯೇ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕಟೀಲು, ಪೊಳಲಿ ಮುಂತಾದ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಎಲ್ಲ ದೇಗುಲಗಳು ಇಂದು ಬೆಳಗ್ಗಿನಿಂದಲೇ ರಶ್ ಇತ್ತು. ಕಡಲನಗರಿಯ ಶರವು, ಮಂಗಳಾದೇವಿ. ಕುದ್ರೋಳಿ ದೇಗುಲಗಳಿಗೆ ಸಾಕಷ್ಟು ಜನರು ಧಾವಿಸಿ ದೇವರಿಗೆ ನಮಿಸಿ ಬಂದಿದ್ದಾರೆ.
ಸಂಜೆ 4 ಗಂಟೆ ಕಳೆಯುತ್ತಿದ್ದಂತೆ ಮಂಗಳೂರಿನ ಪಣಂಬೂರು ಬೀಚ್, ತಣ್ಣೀರು ಬಾವಿ ಬೀಚ್, ಉಳ್ಳಾಲ ಸೋಮೇಶ್ವರ ಬೀಚ್, ಸುರತ್ಕಲ್ ಎನ್ ಐಟಿಕೆ ಬೀಚ್, ಸಸಿಹಿತ್ಲು ಬೀಚ್ ಪ್ರವಾಸಿಗರಿಂದ ಮತ್ತು ವಿಹಾರಾರ್ಥಿಗಳಿಂದ ತುಂಬಿತ್ತು. ಪಣಂಬೂರು ಬೀಚ್ ನಲ್ಲಿ ಜನರ ಖುಷಿ ಕಳೆಗಟ್ಟಿತ್ತು. ಗಾಳಿಪಟ ಹಾರಾಟ, ಬೆಲೂನ್ ಹಾರಾಟ ನಡೆಯಿತು.



ದೇಗುಲಗಳ ಜತೆ ಚರ್ಚ್ ಗಳಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ ನಡೆಯಿತು. ಮಂಗಳೂರಿನ ಮಿಲಾಗ್ರಿಸ್ ಚರ್ಚ್,ವೆಲೆಂನ್ಸಿಯ ದೇರೆಬೈಲ್ ಚರ್ಚ್, ರೊಸಾರಿಯೊ ಚರ್ಚ್, ಬಿಜೈ ಚರ್ಚ್, ಸೈಂಟ್ ಸೆಬಾಸ್ಟಿಯನ್ ಚರ್ಚ್ ಸೇರಿದಂತೆ ಎಲ್ಲ ಚರ್ಚ್ ಗಳಲ್ಲಿ ಹೊಸ ವರ್ಷದ ಪ್ರಯುಕ್ತ ವಿಶೇಷ ಪ್ರಾರ್ಥನೆ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು