8:57 PM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹೊಸತಾಗಿ ಖರೀದಿಸಿ ಮನೆಯಲ್ಲೇ ಯುವತಿ ಆತ್ಮಹತ್ಯೆ: ಮೋಸ ಹೋದರೆ ಮನೆ ಖರೀದಿಯಲ್ಲಿ? ಕಿರುಕುಳ ನೀಡಿದರೇ ಬ್ಯಾಂಕ್ ಅಧಿಕಾರಿಗಳು?

09/06/2023, 11:16

ಮಂಗಳೂರು(reporterkarnataka.com): ಹೊಸತಾಗಿ ಖರೀದಿಸಿದ ಮನೆಯಲ್ಲೇ ಯುವತಿಯೊಬ್ಬರು ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತೊಕ್ಕೊಟ್ಟು ಸಮೀಪದ ಕುಂಪಲ ಬಳಿಯ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಸಾವಿಗೆ ಶರಣಾದ ಯುವತಿಯನ್ನು ಅಶ್ವಿನಿ ಬಂಗೇರ(25) ಎಂದು ಗುರುತಿಸಲಾಗಿದೆ. ರಾತ್ರಿ ಗೆಳತಿ ಜತೆ ಚಾಟ್ ಮಾಡಿದ್ದ ಅಶ್ವಿನಿ ಅವರು ಬೆಳಗ್ಗೆ ಗೆಳತಿ ಬಂದು ಬಾಗಿಲು ಹೊಡೆದು ನೋಡಿದಾಗ ಫ್ಯಾನ್ ಗೆ ಸೀರೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂತು. ಅಶ್ವಿನಿ ಅವರು ಬರೆದ ಡೆತ್ ನೋಟ್ ನಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು, ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿದ್ದರು ಎಂದು ಬರೆದಿದ್ದರು.
ಮೂಲತಃ ಬಂಟ್ವಾಳ ತಾಲೂಕಿನ ಫರಂಗಿಪೇಟೆಯವರಾದ ಅಶ್ವಿನಿ ಅವರು ವಿದೇಶದಲ್ಲಿ ಉದ್ಯೋಗದಲ್ಲಿದ್ದರು. ಒಂದೂವರೆ ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದ ಅವರು ಕುಂಪಲ ಸಮೀಪದ ಚಿತ್ರಾಂಜಲಿ ನಗರದಲ್ಲಿ ಮನೆ ಖರೀದಿಸಿದ್ದರು. ಜೂನ್ 3ರಂದು ಗೃಹ ಪ್ರವೇಶ ಮಾಡಿ ತಾಯಿ, ದೊಡ್ಡಮ್ಮ ಜತೆ
ನೆಲೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು