10:20 AM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಹೊಸ್ಮಾರುವಿನಲ್ಲಿ ಕಾಂಪ್ಲೆಕ್ಸ್‌ಗೆ ಪ್ರಥಮ ಬಾರಿ ತುಲುಲಿಪಿ ನಾಮಫಲಕ

22/08/2021, 18:08

ಹೊಸ್ಮಾರು(reporterkarnataka.com); ರವೀಂದ್ರ ಪೂಜಾರಿ ಮಾಲಿಕತ್ವದ ಹೊಸ್ಮಾರು ಈದು ಕ್ರಾಸ್ ಬಳಿಯಿರುವ ಮನ್ವಿತ್ ಕಾಂಪ್ಲೆಕ್ಸ್‌ಗೆ ಜೈ ತುಲುನಾಡ್ ರಿ. ಸಂಘಟನೆ ಕಾರ್ಲ ಘಟಕದ ಸಹಕಾರದೊಂದಿಗೆ ತುಲು ಲಿಪಿಯಲ್ಲಿ ನಾಮಫಲಕ ಅಳವಡಿಸಲಾಯಿತು.


ಈದು ಗ್ರಾಮದಲ್ಲಿ ಪ್ರಥಮ ಬಾರಿ ಕಾಂಪ್ಲೆಕ್ಸ್‌ಗೆ ತುಲುಲಿಪಿ ಅಳವಡಿಕೆ ಮಾಡಿದ ಹೆಗ್ಗಳಿಕೆಗೆ ಪಾತ್ರವಾಯಿತು. ರವೀಂದ್ರ ಪೂಜಾರಿಯವರು ತುಲುಲಿಪಿಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದು ತಾನು ಹೊರ ದೇಶದಲ್ಲಿದ್ದರೂ ಕೂಡ ತುಲು ಲಿಪಿಯನ್ನು ಕಲಿಯುತ್ತಿದ್ದಾರೆ ಮತ್ತು ಅವರ ಪತ್ನಿ ಮಕ್ಕಳು ತುಲುಲಿಪಿಯನ್ನು ಕಲಿಯುತ್ತಿದ್ದಾರೆ.

ನಾಮ ಫಲಕದ ಉದ್ಘಾಟನೆಯನ್ನು ಪೂರ್ಣಿಮಾ ರವೀಂದ್ರ ಪೂಜಾರಿ ನೆರೆವೇರಿಸಿದರು. ಈ ಸಂದರ್ಭದಲ್ಲಿ ಜೈ ತುಲುನಾಡ್ ರಿ. ಕೇಂದ್ರ ಸಂಘಟನಾ ಕಾರ್ಯದರ್ಶಿ ಆರ್‌.ಸಿ   ದುರ್ಗಾನಗರ, ಕಾರ್ಲ ಯುನಿಟ್‌ನ ಸಂಚಾಲಕರಾದ ವಿಶು ಶ್ರೀಕೇರ, ಶೇಖರ್ ಶ್ರೀಗಂಗೆ, ನಾರಾವಿ  ಸಂತ ಅಂತೋನಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರದೀಪ್ ಬಿ.

ಹಾಗೂ ಸದಸ್ಯರಾದ ಪ್ರಶಾಂತ್ ಶ್ರೀನಿಧಿ, ಪ್ರೀತಂ ಕೋಟ್ಯಾನ್ ಬಜಗೋಳಿ, ದಿವಾಕರ್ ಈದು, ಗಣೇಶ್ ಈದು, ಲಕ್ಮೀ , ಹೋಟೆಲ್ ನ್ಯೂ ಸುರಕ್ಷಾ ಮಾಲಕರಾದ ಗುಲಾಬಿ ಗೋಪಾಲ್, ಶೃಂಗಾರ ಪ್ಯಾನ್ಸಿ& ಪಾರ್ಲರ್ ಮಾಲಕರಾದ ವೀಣಾ ಸತೀಶ್ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು