7:41 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

Hospete | ಹೆದ್ದಾರಿಯಲ್ಲಿ ಮರ್ಸಿಡಿಸ್‌ ಬೆಂಜ್‌ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

13/06/2026, 13:07

ಹೊಸಕೋಟೆ(reporterkarnataka.com): ನೂತನವಾಗಿ ನಿರ್ಮಾಣವಾಗಿರುವ ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿದ ಐಷಾರಾಮಿ ಬೆಂಜ್ ಕಾರೊಂದು ರಸ್ತೆ ಮಧ್ಯದ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಯುವತಿಯೊಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.
ಈ ದಾರುಣ ಘಟನೆಯು ಹೊಸಕೋಟೆ ಸಮೀಪದ ದೊಡ್ಡ ಹುಲ್ಲೂರು ಬಳಿ ನಡೆದಿದೆ. ವೇಗವಾಗಿ ಬಂದ ಮರ್ಸಿಡಿಸ್ ಬೆಂಜ್ ಕಾರು ಚಾಲಕನ ಹತೋಟಿ ತಪ್ಪಿ ರಸ್ತೆ ವಿಭಾಜಕಕ್ಕೆ (ಡಿವೈಡರ್) ಅಪ್ಪಳಿಸಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗಿದ್ದ ಯುವತಿ ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗಳಿಂದಾಗಿ ಅಪಘಾತದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನಲ್ಲಿದ್ದ ಇತರರ ವಿವರಗಳು ಮತ್ತು ಅಪಘಾತಕ್ಕೆ ನಿಖರ ಕಾರಣ ಏನೆಂಬುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು