4:52 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹಾಸ್ಟೇಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿ ಸಾವು: ಆತ್ಮಹತ್ಯೆಯೋ? ಆಕಸ್ಮಿಕವೋ?: ವಾರ್ಡನ್ ಅವರೇ ಉತ್ತರಿಸಿ

02/01/2025, 20:03

ಮೋಹನ್ ನಂಜನಗೂಡು ಮೈಸೂರು

info.reporterkarnataka@gmal.com

ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ವಿಧ್ಯಾರ್ಥಿನಿಯರ ವಸತಿ ನಿಲಯದ ಕಟ್ಟಡದಿಂದ ವಿದ್ಯಾರ್ಥಿಯೋರ್ವ ಬಿದ್ದು ಸಾವನ್ನಪ್ಪಿರುವ ಘಟನೆ ನಂಜನಗೂಡು ಹಾಗೂ ಗುಂಡ್ಲುಪೇಟೆ ತಾಲೂಕಿನ ಗಡಿ ಹಂಚಿನ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಮಣಿತ್(17) ಮೃತ ವಿದ್ಯಾರ್ಥಿ.
ಎರಡನೇ ಮಹಡಿಯ ಕಿಟಕಿ ಬಳಿಯಿಂದ ಮಧ್ಯರಾತ್ರಿ 2 ಗಂಟೆ ವೇಳೆ ಬಿದ್ದು ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಣಿತ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಮಧ್ಯರಾತ್ರಿ 2 ಗಂಟೆಯಲ್ಲಿ ಬಿದ್ದ ಮಣಿತ್ ನನ್ನು ಮರುದಿನ ಬೆಳಿಗ್ಗೆ 8 ಗಂಟೆಗೆ ವಿದ್ಯಾರ್ಥಿಗಳು ಗಮನಿಸಿ ವಸತಿ ಶಾಲೆಯ ಮುಖ್ಯಸ್ಥರಿಗೆ ತಿಳಿಸಿದ್ದಾರೆ. ಕೂಡಲೇ ಗಾಯಗೊಂಡು ನರಳುತ್ತಿದ್ದ ಮಣಿತ್ ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಒಂದೇ ಆವರಣದಲ್ಲಿ ವಿಧ್ಯಾರ್ಥಿನಿಯರ ಹಾಗೂ ವಿದ್ಯಾರ್ಥಿಗಳ ಪದವಿ ಪೂರ್ವ ಕಾಲೇಜಿನ ಪ್ರತ್ಯೇಕ ವಸತಿ ನಿಲಯಗಳಿವೆ. ವಿದ್ಯಾರ್ಥಿನಿಯರು ವಸತಿ ನಿಲಯಕ್ಕೆ ಮಣಿತ್ ಹೋದ ಉದ್ದೇಶವೇನು ಗೊತ್ತಿಲ್ಲ,ವಿದ್ಯಾರ್ಥಿನಿಯರ ಕೊಠಡಿಯ ಕಿಟಕಿ ಬಳಿಯಿಂದ ಮಣಿತ್ ಬಿದ್ದಿದ್ದಾನೆ.ಮಧ್ಯರಾತ್ರಿಯಲ್ಲಿ ಮಣಿತ್ ಗೆ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ಕೆಲಸವೇನಿತ್ತು..? ಮಧ್ಯರಾತ್ರಿ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ಅಕ್ರಮವಾಗಿ ಪ್ರವೇಶಿಸಿದ್ದು ಹೇಗೆ..? ವಾಚ್ ಮೆನ್ ಗಳು ಗಮನಿಸಲಿಲ್ಲವೇ…?ಪ್ರಿನ್ಸಿಪಾಲ್ ಮುನ್ನೆಚ್ಚರಿಕೆ ತೆಗೆದುಕೊಂಡಿರಲಿಲ್ಲವೇ…? ಯಾರು ಬೇಕಾದ್ರೂ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ಮಧ್ಯರಾತ್ರಿ ಪ್ರವೇಶಿಸಬಹುದೇ..?ಹಾಗಿದ್ದಲ್ಲಿ ಇಲ್ಲಿ ತಂಗಿರುವ ವಿದ್ಯಾರ್ಥಿನಿಯರ ರಕ್ಷಣೆ ಹೇಗೆ..? ಎಂಬ ಪ್ರಶ್ನೆಗಳಿಗೆ ಉತ್ತರ ಸಿಗುತ್ತಿಲ್ಲ.
ಮಧ್ಯರಾತ್ರಿ ಬಿದ್ದು ನರಳಾಡುತ್ತಿದ್ದರೂ ಯಾರ ಗಮನಕ್ಕೂ ಬಂದಿಲ್ಲವೆಂದರೆ ಅಲ್ಲಿನ ವ್ಯವಸ್ಥೆ ಹೇಗಿದೆ..? ಎಂಬ ಅನುಮಾನಗಳು ಕಾಡುತ್ತಿವೆ.
ಎರಡನೇ ಮಹಡಿ ಏರಿ ವಿದ್ಯಾರ್ಥಿನಿ ಕೊಠಡಿ ಬಳಿ ತಲುಪಿದ ಕಾರಣಾವಾದ್ರೂ ಏನು…? ವಿದ್ಯಾರ್ಥಿನಿಯರನ್ನ ಮಧ್ಯರಾತ್ರಿ ನೋಡುವ ಕೆಟ್ಟ ಚಟವೇ…? ಅಥವಾ ಪ್ರೇಮ ಪ್ರಸಂಗವೇ…? ತನ್ನಿಷ್ಟದಂತೆ ನಡೆಯಲಿಲ್ಲವೆಂದು ಬಿದ್ದು ಆತ್ಮಹತ್ಯೆ ಮಾಡಿಕೊಂಡನೇ..? ಅಥವಾ ಆಕಸ್ಮಿಕವಾಗಿ ಜಾರಿ ಬಿದ್ದನೇ…? ಇವೆಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ.
ಸಂಭಂಧ ಪಟ್ಟ ಇಲಾಖೆ ಅಧಿಕಾರಿಗಳು ಘಟನೆ ಬಗ್ಗೆ ಕೂಲಂಕುಷ ತನಿಖೆ ನಡೆಸಬೇಕಿದೆ.ಬಡ ಕುಟುಂಬ ದ ವಿದ್ಯಾರ್ಥಿಗಳು ಒಳ್ಳೆಯ ಭವಿಷ್ಯದ ದೃಷ್ಟಿಯಿಂದ ಇಲ್ಲಿ ಪ್ರವೇಶ ಪಡೆಯುತ್ತಾರೆ. ಆದರೆ ಅವರ ರಕ್ಷಣೆ ಹೇಗೆ ಎಂಬ ಪ್ರಶ್ನೆಯೂ ಉದ್ಭವವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು