9:02 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಹಾಸ್ಟೆಲ್ ಮಕ್ಕಳ ಪಾಲಕರ ಜತೆ ಕಳುಹಿಸಲು ನಿರಾಕರಣೆ: ಎಕ್ಸ್ ಪರ್ಟ್ ಕಾಲೇಜು ಮುಖ್ಯಸ್ಥ ಡಾ. ನರೇಂದ್ರ ನಾಯಕ್ ವಿರುದ್ಧ ಪ್ರಕರಣ ದಾಖಲು

30/04/2021, 13:33

 

ಮಂಗಳೂರು(reporterkarnataka news): ನಗರದ ಹೊರವಲಯ ವಳಚ್ಚಿಲ್ ನಲ್ಲಿರುವ ಎಕ್ಸ್‌ಪರ್ಟ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಊರಿಗೆ ತೆರಳಲು ಅವಕಾಶ ನೀಡದೆ, ವಿದ್ಯಾರ್ಥಿಗಳ ಪಾಲಕರು ಕಾಲೇಜು ಎದುರು ಜಮಾಯಿಸಲು ಕಾರಣರಾದ ಸಂಸ್ಥೆಯ ಮುಖ್ಯಸ್ಥ ಡಾ. ನರೇಂದ್ರ ನಾಯಕ್ ಹಾಗೂ ಆಡಳಿತ ಸಮಿತಿಯ ವಿರುದ್ಧ ರಾಜ್ಯ ಸರಕಾರ ಹಾಗೂ ಜಿಲ್ಲಾಧಿಕಾರಿಯವರ ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು ಗ್ರಾಮಾಂತರ ಠಾಣೆಯ ಪಿಎಸ್ ಐ ಮಂಜುಳಾ ಪಿ. ಅವರು ತಮ್ಮ ಸಿಬ್ಬಂದಿಗಳ ಜತೆ ಏಪ್ರಿಲ್ 29ರಂದು ರೌಂಡ್ಸ್ ಹೊರಟಾಗಿ ವಳಚ್ಚಿಲ್ ಎಕ್ಸ್ ಪರ್ಟ್ ಕಾಲೇಜು ಎದುರು ಸುಮಾರು 20- 30 ಜನರು ಸೇರಿದ್ದರು. ಲಾಕ್ ಡೌನ್ ಅವಧಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಜನರ ಗುಂಪುಗೂಡುವುದು ಕಾನೂನಿಗೆ ವಿರುದ್ಧವಾಗಿರುವುದರಿಂದ ಪಿಎಸ್ ಐ ಮಂಜುಳಾ ಅವರು ಈ ಕುರಿತು ಗುಂಪು ಸೇರಿದವರಲ್ಲಿ ವಿಚಾರಿಸಿದ್ದರು. ಆಗ ನೆರೆದ ಜನರು, ನಮ್ಮ ಮಕ್ಕಳು ಹಾಸ್ಟೆಲ್ ನಲ್ಲಿದ್ದುಕೊಂಡು ಎಕ್ಸ್‌ಪರ್ಟ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಲಾಕ್ ಡೌನ್ ಇರುವುದರಿಂದ ನಾವು ಮಕ್ಕಳನ್ನು ನಮ್ಮ ಜತೆ ಊರಿಗೆ ಕರೆದುಕೊಂಡು ಹೋಗಲು ಬಂದಿದ್ದೇವೆ. ಆದರೆ ಸಂಸ್ಥೆಯ ಮುಖ್ಯಸ್ಥರಾದ ಡಾ. ನರೇಂದ್ರ ನಾಯಕ್ ಅವರು ನಮ್ಮ ಮಕ್ಕಳನ್ನು ನಮ್ಮ ಜತೆ ಕಳುಹಿಸುತ್ತಿಲ್ಲ. ನಾವು ಏನು ಮಾಡುವುದು ಎಂದು ತಿಳಿಯದೆ ಇಲ್ಲಿ ನಿಂತಿದ್ದೇವೆ ಎಂದು ಉತ್ತರಿಸಿದ್ದರು. ಮಂಗಳೂರು ಗ್ರಾಮಾಂತರ ಠಾಣೆಯ ಪಿಎಸ್ ಐ ಅವರು ಈ ಕುರಿತು ವೀಡಿಯೊ ಚಿತ್ರೀಕರಣ ಕೂಡ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರಕಾರ ಹಾಗೂ ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿದ ಎಕ್ಸ್‌ಪರ್ಟ್ ಸಂಸ್ಥೆಯ ಡಾ. ನರೇಂದ್ರ ನಾಯಕ್ ಹಾಗೂ ಆಡಳಿತ ಸಮಿತಿಯ ವಿರುದ್ದ ಕರ್ನಾಟಕ ಎಪಿಡಮಿಕ್ ಡಿಸಿಸ್ ಕಾಯಿದೆ 2020ರ ಕಲಂ 5(1), 5(4)ರ ಪ್ರಕಾರ ಪ್ರಕರಣ ದಾಖಲಿಸಲಾಗುವುದು ಎಂದು ಪಿಎಸ್ ಐ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು