10:40 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಹಾಸ್ಟೆಲ್ ಮಕ್ಕಳ ಪಾಲಕರ ಜತೆ ಕಳುಹಿಸಲು ನಿರಾಕರಣೆ: ಎಕ್ಸ್ ಪರ್ಟ್ ಕಾಲೇಜು ಮುಖ್ಯಸ್ಥ ಡಾ. ನರೇಂದ್ರ ನಾಯಕ್ ವಿರುದ್ಧ ಪ್ರಕರಣ ದಾಖಲು

30/04/2021, 13:33

 

ಮಂಗಳೂರು(reporterkarnataka news): ನಗರದ ಹೊರವಲಯ ವಳಚ್ಚಿಲ್ ನಲ್ಲಿರುವ ಎಕ್ಸ್‌ಪರ್ಟ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಊರಿಗೆ ತೆರಳಲು ಅವಕಾಶ ನೀಡದೆ, ವಿದ್ಯಾರ್ಥಿಗಳ ಪಾಲಕರು ಕಾಲೇಜು ಎದುರು ಜಮಾಯಿಸಲು ಕಾರಣರಾದ ಸಂಸ್ಥೆಯ ಮುಖ್ಯಸ್ಥ ಡಾ. ನರೇಂದ್ರ ನಾಯಕ್ ಹಾಗೂ ಆಡಳಿತ ಸಮಿತಿಯ ವಿರುದ್ಧ ರಾಜ್ಯ ಸರಕಾರ ಹಾಗೂ ಜಿಲ್ಲಾಧಿಕಾರಿಯವರ ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು ಗ್ರಾಮಾಂತರ ಠಾಣೆಯ ಪಿಎಸ್ ಐ ಮಂಜುಳಾ ಪಿ. ಅವರು ತಮ್ಮ ಸಿಬ್ಬಂದಿಗಳ ಜತೆ ಏಪ್ರಿಲ್ 29ರಂದು ರೌಂಡ್ಸ್ ಹೊರಟಾಗಿ ವಳಚ್ಚಿಲ್ ಎಕ್ಸ್ ಪರ್ಟ್ ಕಾಲೇಜು ಎದುರು ಸುಮಾರು 20- 30 ಜನರು ಸೇರಿದ್ದರು. ಲಾಕ್ ಡೌನ್ ಅವಧಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಜನರ ಗುಂಪುಗೂಡುವುದು ಕಾನೂನಿಗೆ ವಿರುದ್ಧವಾಗಿರುವುದರಿಂದ ಪಿಎಸ್ ಐ ಮಂಜುಳಾ ಅವರು ಈ ಕುರಿತು ಗುಂಪು ಸೇರಿದವರಲ್ಲಿ ವಿಚಾರಿಸಿದ್ದರು. ಆಗ ನೆರೆದ ಜನರು, ನಮ್ಮ ಮಕ್ಕಳು ಹಾಸ್ಟೆಲ್ ನಲ್ಲಿದ್ದುಕೊಂಡು ಎಕ್ಸ್‌ಪರ್ಟ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಲಾಕ್ ಡೌನ್ ಇರುವುದರಿಂದ ನಾವು ಮಕ್ಕಳನ್ನು ನಮ್ಮ ಜತೆ ಊರಿಗೆ ಕರೆದುಕೊಂಡು ಹೋಗಲು ಬಂದಿದ್ದೇವೆ. ಆದರೆ ಸಂಸ್ಥೆಯ ಮುಖ್ಯಸ್ಥರಾದ ಡಾ. ನರೇಂದ್ರ ನಾಯಕ್ ಅವರು ನಮ್ಮ ಮಕ್ಕಳನ್ನು ನಮ್ಮ ಜತೆ ಕಳುಹಿಸುತ್ತಿಲ್ಲ. ನಾವು ಏನು ಮಾಡುವುದು ಎಂದು ತಿಳಿಯದೆ ಇಲ್ಲಿ ನಿಂತಿದ್ದೇವೆ ಎಂದು ಉತ್ತರಿಸಿದ್ದರು. ಮಂಗಳೂರು ಗ್ರಾಮಾಂತರ ಠಾಣೆಯ ಪಿಎಸ್ ಐ ಅವರು ಈ ಕುರಿತು ವೀಡಿಯೊ ಚಿತ್ರೀಕರಣ ಕೂಡ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರಕಾರ ಹಾಗೂ ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿದ ಎಕ್ಸ್‌ಪರ್ಟ್ ಸಂಸ್ಥೆಯ ಡಾ. ನರೇಂದ್ರ ನಾಯಕ್ ಹಾಗೂ ಆಡಳಿತ ಸಮಿತಿಯ ವಿರುದ್ದ ಕರ್ನಾಟಕ ಎಪಿಡಮಿಕ್ ಡಿಸಿಸ್ ಕಾಯಿದೆ 2020ರ ಕಲಂ 5(1), 5(4)ರ ಪ್ರಕಾರ ಪ್ರಕರಣ ದಾಖಲಿಸಲಾಗುವುದು ಎಂದು ಪಿಎಸ್ ಐ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು