1:57 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಹಾಸ್ಟೆಲ್ ಮಕ್ಕಳ ಪಾಲಕರ ಜತೆ ಕಳುಹಿಸಲು ನಿರಾಕರಣೆ: ಎಕ್ಸ್ ಪರ್ಟ್ ಕಾಲೇಜು ಮುಖ್ಯಸ್ಥ ಡಾ. ನರೇಂದ್ರ ನಾಯಕ್ ವಿರುದ್ಧ ಪ್ರಕರಣ ದಾಖಲು

30/04/2021, 13:33

 

ಮಂಗಳೂರು(reporterkarnataka news): ನಗರದ ಹೊರವಲಯ ವಳಚ್ಚಿಲ್ ನಲ್ಲಿರುವ ಎಕ್ಸ್‌ಪರ್ಟ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಊರಿಗೆ ತೆರಳಲು ಅವಕಾಶ ನೀಡದೆ, ವಿದ್ಯಾರ್ಥಿಗಳ ಪಾಲಕರು ಕಾಲೇಜು ಎದುರು ಜಮಾಯಿಸಲು ಕಾರಣರಾದ ಸಂಸ್ಥೆಯ ಮುಖ್ಯಸ್ಥ ಡಾ. ನರೇಂದ್ರ ನಾಯಕ್ ಹಾಗೂ ಆಡಳಿತ ಸಮಿತಿಯ ವಿರುದ್ಧ ರಾಜ್ಯ ಸರಕಾರ ಹಾಗೂ ಜಿಲ್ಲಾಧಿಕಾರಿಯವರ ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು ಗ್ರಾಮಾಂತರ ಠಾಣೆಯ ಪಿಎಸ್ ಐ ಮಂಜುಳಾ ಪಿ. ಅವರು ತಮ್ಮ ಸಿಬ್ಬಂದಿಗಳ ಜತೆ ಏಪ್ರಿಲ್ 29ರಂದು ರೌಂಡ್ಸ್ ಹೊರಟಾಗಿ ವಳಚ್ಚಿಲ್ ಎಕ್ಸ್ ಪರ್ಟ್ ಕಾಲೇಜು ಎದುರು ಸುಮಾರು 20- 30 ಜನರು ಸೇರಿದ್ದರು. ಲಾಕ್ ಡೌನ್ ಅವಧಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಜನರ ಗುಂಪುಗೂಡುವುದು ಕಾನೂನಿಗೆ ವಿರುದ್ಧವಾಗಿರುವುದರಿಂದ ಪಿಎಸ್ ಐ ಮಂಜುಳಾ ಅವರು ಈ ಕುರಿತು ಗುಂಪು ಸೇರಿದವರಲ್ಲಿ ವಿಚಾರಿಸಿದ್ದರು. ಆಗ ನೆರೆದ ಜನರು, ನಮ್ಮ ಮಕ್ಕಳು ಹಾಸ್ಟೆಲ್ ನಲ್ಲಿದ್ದುಕೊಂಡು ಎಕ್ಸ್‌ಪರ್ಟ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಲಾಕ್ ಡೌನ್ ಇರುವುದರಿಂದ ನಾವು ಮಕ್ಕಳನ್ನು ನಮ್ಮ ಜತೆ ಊರಿಗೆ ಕರೆದುಕೊಂಡು ಹೋಗಲು ಬಂದಿದ್ದೇವೆ. ಆದರೆ ಸಂಸ್ಥೆಯ ಮುಖ್ಯಸ್ಥರಾದ ಡಾ. ನರೇಂದ್ರ ನಾಯಕ್ ಅವರು ನಮ್ಮ ಮಕ್ಕಳನ್ನು ನಮ್ಮ ಜತೆ ಕಳುಹಿಸುತ್ತಿಲ್ಲ. ನಾವು ಏನು ಮಾಡುವುದು ಎಂದು ತಿಳಿಯದೆ ಇಲ್ಲಿ ನಿಂತಿದ್ದೇವೆ ಎಂದು ಉತ್ತರಿಸಿದ್ದರು. ಮಂಗಳೂರು ಗ್ರಾಮಾಂತರ ಠಾಣೆಯ ಪಿಎಸ್ ಐ ಅವರು ಈ ಕುರಿತು ವೀಡಿಯೊ ಚಿತ್ರೀಕರಣ ಕೂಡ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರಕಾರ ಹಾಗೂ ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿದ ಎಕ್ಸ್‌ಪರ್ಟ್ ಸಂಸ್ಥೆಯ ಡಾ. ನರೇಂದ್ರ ನಾಯಕ್ ಹಾಗೂ ಆಡಳಿತ ಸಮಿತಿಯ ವಿರುದ್ದ ಕರ್ನಾಟಕ ಎಪಿಡಮಿಕ್ ಡಿಸಿಸ್ ಕಾಯಿದೆ 2020ರ ಕಲಂ 5(1), 5(4)ರ ಪ್ರಕಾರ ಪ್ರಕರಣ ದಾಖಲಿಸಲಾಗುವುದು ಎಂದು ಪಿಎಸ್ ಐ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು