10:33 AM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಹಾಸ್ಟೆಲ್ ನಲ್ಲಿ ಪಿಯು ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಸಿಬ್ಬಂದಿಗಳ ನಿರ್ಲಕ್ಷ್ಯ ಕಾರಣ; ಹೆತ್ತವರ ಆರೋಪ

09/03/2023, 10:41

ದಾವಣಗೆರೆ(reporterkarnataka.com): ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಮಾಜ ಕಲ್ಯಾಣ ಇಲಾಖೆ ನಡೆಸುವ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ನಲ್ಲಿ ನೇಣು ಬೀಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ದಾರುಣ ಘಟನೆ ಹರಿಹರ ಸಮೀಪ ನಡೆದಿದೆ.

ಡಾ. ಬಿಆರ್ ಅಂಬೇಡ್ಕರ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ, ದಾವಣಗೇರಿ ತಾಲೂಕಿನ ಹೆಚ್ಚು ಬಸವಪುರ ನಿವಾಸಿ ವರ್ಷಾ (18) ಮೃತ ದುರ್ದೇವಿ. ಈಕೆ ಶಿವಣ್ಣ ಅವರ ಪುತ್ರಿ ಎಂದು ತಿಳಿದು ಬಂದಿದೆ.
ಮದ್ಯಾಹ್ನ ಸುಮಾರು 12ರ ಸಮಯದಲ್ಲಿ ಕೊಠಡಿಯ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವರ್ಷಾ ಕಂಡು ಬಂದಿದ್ದಾಳೆ. ತಕ್ಷಣ ಹಾಸ್ಟೆಲ್ ಸಿಬ್ಬಂದಿ ಕೊಠಡಿ ಪ್ರವೇಶಿಸಿ ನೇಣು ಬಿಗಿದ ಸ್ಥಿತಿಯಲ್ಲಿದ್ದ ವರ್ಷಾಳನ್ನು
ಕೆಳಗಿಳಿಸಿ ನಗರದ ಸಾರ್ವಜನಿಕರ ಆಸ್ಪತ್ರೆಗೆ ಸಾಗಿಸಿದ್ದಾರೆ. ಪರೀಕ್ಷಿಸಿದ ವೈದ್ಯರು ವರ್ಷ ಮೃತಪಟ್ಟಿರುವದಾಗಿ ತಿಳಿಸಿರುತ್ತಾರೆ.

ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ವೃತ ವಿದ್ಯಾರ್ಥಿನಿಯ ಪೋಷಕರು ಮಗಳ ಸಾವಿಗೆ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳ ನಿರ್ಲಕ್ಷವೇ ಕಾರಣ ಅವರನ್ನು ಕೂಡಲೇ ಅಮಾನತ್ತು ಪಡಿಸಬೇಕೆಂದು ಆಗ್ರಹಿಸಿದರು. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು