7:27 AM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ಹೊಟೇಲ್ ವ್ಯವಹಾರದಲ್ಲಿ ನಷ್ಟ: ಬೈಕಾಡಿಯಲ್ಲಿ ಯುವ ಉದ್ಯಮಿ ಆತ್ಮಹತ್ಯೆ

10/05/2022, 23:39

ಬ್ರಹ್ಮಾವರ(reporterkarnataka.com): ಹೊಟೇಲ್ ವ್ಯವಹಾರದಲ್ಲಿ ಉಂಟಾದ ನಷ್ಟದಿಂದ ಮನನೊಂದ ಯುವ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಕಾಡಿ ಗ್ರಾಮದ ಗಾಂಧಿ ನಗರ ಎಂಬಲ್ಲಿ ಸೋಮವಾರ ನಡೆದಿದೆ.

ಮೃತರನ್ನು ಗಾಂಧಿ ನಗರ ನಿವಾಸಿ ಪ್ರಭಾಕರ ಶೆಟ್ಟಿಗಾರ್ ಎಂಬವರ ಪುತ್ರ 
ಪೃಥ್ವಿರಾಜ್ (27) ಎಂದು ಗುರುತಿಸಲಾಗಿದೆ. ಇವರು ಸುಮಾರು ಒಂದೂವರೆ ವರ್ಷದ ಹಿಂದೆ ಹಾಸನದಲ್ಲಿ ಸುಮಾರು 14 ಲಕ್ಷ ಖರ್ಚು ಮಾಡಿ ಹೊಟೇಲ್ ವ್ಯವಹಾರ ಆರಂಭಿಸಿದ್ದರು. ಆದರೆ ಹೊಟೇಲ್ ವ್ಯವಹಾರದಲ್ಲಿ ನಷ್ಟ ಉಂಟಾಗಿ, ಕಳೆದ 6 ತಿಂಗಳಿಂದ ಮನೆಯಲ್ಲಿಯೇ ಇದ್ದು ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದರು.

ವ್ಯವಹಾರದಲ್ಲಿನ ನಷ್ಟದಿಂದ ಖಿನ್ನತೆಗೆ ಒಳಗಾಗಿ ಮನನೊಂದ ಇವರು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು