11:38 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಮರ ಬಿದ್ದು ಮನೆ ಜಖಂ: ಪವಾಡಸದೃಶ ಮಲಗಿದ್ದ ಮನೆಮಂದಿ ಅಪಾಯದಿಂದ ಪಾರು

07/08/2024, 20:00

 

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಜಾವಳಿ ಬಳಿಯ ಮಲೆಮನೆ ಗ್ರಾಮದಲ್ಲಿ ಬುಧವಾರ ಮುಂಜಾನೆ ಮರವೊಂದು ಬಿದ್ದು ಮನೆ ಜಖಂ ಗೊಂಡಿರುವ ಘಟನೆ ನಡೆದಿದೆ. ಬಾಳೂರು ಹೋಬಳಿಯ ಜಾವಳಿ ಸಮೀಪದ ಮಲೆಮನೆ ಗ್ರಾಮದ ಸುಧಾಕರ್ ಎಂಬವರ ಮನೆ ಮೇಲೆ ಬುಧವಾರ ಮುಂಜಾನೆ ಎಲ್ಲರೂ ಮಲಗಿದ್ದ ವೇಳೆ ಬೃಹತಾಕಾರದ ಬೈನೇಮರ ಬಿದ್ದು ಮನೆಯ ಮೇಲ್ಛಾವಣಿ ಹೆಂಚುಗಳು ಪುಡಿಯಾಗಿ ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಮಲಗಿದ್ದವರಿಗೆ ಯಾವುದೇ ಹಾನಿ ಸಂಭವಿಸಿಲ್ಲ.

ಪರಿಹಾರಕ್ಕೆ ಒತ್ತಾಯ: ಸುಧಾಕರ್ ಅವರು ಬಡ ಕುಟುಂಬದಿಂದ ಬಂದಿದ್ದು ಮೂಲತಃ ಕೃಷಿಕರಾಗಿದ್ದಾರೆ. ಬುಧವಾರ ಮರ ಬಿದ್ದು ಮನೆ ಕೂಡ ಜಖಂಗೊಂಡಿದೆ. ಮಳೆಗಾಲವಾದ್ದುದರಿಂದ ಮನೆಯು ಶಿಥಿಲವಾಗಿದೆ. ಇದರಿಂದ ಸಂಬಂಧಿಸಿದ ಅಧಿಕಾರಿಗಳು ಮನೆ ದುರಸ್ತಿಗೆ ಪರಿಹಾರ ನೀಡಬೇಕೆಂದು ಸುಧಾಕರ್ ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು