10:47 AM Thursday16 - October 2025
ಬ್ರೇಕಿಂಗ್ ನ್ಯೂಸ್
ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ… ಮೆಡಿಕಲ್‌ ಅಗತ್ಯತೆಗೆ ಪೂರೈಕೆಗೆ ಡ್ರೋನ್‌ ಬಳಕೆಗೆ ಚಾಲನೆ: ಏರ್‌ಬೌಂಡ್‌ ಸಂಸ್ಥೆಯಿಂದ ಡ್ರೋನ್‌ ಮೂಲಕ… Shivamogga | ತೀರ್ಥಹಳ್ಳಿ ಬಾಳೆಬೈಲು ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್ ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ… ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು…

ಇತ್ತೀಚಿನ ಸುದ್ದಿ

ಮರ ಬಿದ್ದು ಮನೆ ಜಖಂ: ಪವಾಡಸದೃಶ ಮಲಗಿದ್ದ ಮನೆಮಂದಿ ಅಪಾಯದಿಂದ ಪಾರು

07/08/2024, 20:00

 

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಜಾವಳಿ ಬಳಿಯ ಮಲೆಮನೆ ಗ್ರಾಮದಲ್ಲಿ ಬುಧವಾರ ಮುಂಜಾನೆ ಮರವೊಂದು ಬಿದ್ದು ಮನೆ ಜಖಂ ಗೊಂಡಿರುವ ಘಟನೆ ನಡೆದಿದೆ. ಬಾಳೂರು ಹೋಬಳಿಯ ಜಾವಳಿ ಸಮೀಪದ ಮಲೆಮನೆ ಗ್ರಾಮದ ಸುಧಾಕರ್ ಎಂಬವರ ಮನೆ ಮೇಲೆ ಬುಧವಾರ ಮುಂಜಾನೆ ಎಲ್ಲರೂ ಮಲಗಿದ್ದ ವೇಳೆ ಬೃಹತಾಕಾರದ ಬೈನೇಮರ ಬಿದ್ದು ಮನೆಯ ಮೇಲ್ಛಾವಣಿ ಹೆಂಚುಗಳು ಪುಡಿಯಾಗಿ ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಮಲಗಿದ್ದವರಿಗೆ ಯಾವುದೇ ಹಾನಿ ಸಂಭವಿಸಿಲ್ಲ.

ಪರಿಹಾರಕ್ಕೆ ಒತ್ತಾಯ: ಸುಧಾಕರ್ ಅವರು ಬಡ ಕುಟುಂಬದಿಂದ ಬಂದಿದ್ದು ಮೂಲತಃ ಕೃಷಿಕರಾಗಿದ್ದಾರೆ. ಬುಧವಾರ ಮರ ಬಿದ್ದು ಮನೆ ಕೂಡ ಜಖಂಗೊಂಡಿದೆ. ಮಳೆಗಾಲವಾದ್ದುದರಿಂದ ಮನೆಯು ಶಿಥಿಲವಾಗಿದೆ. ಇದರಿಂದ ಸಂಬಂಧಿಸಿದ ಅಧಿಕಾರಿಗಳು ಮನೆ ದುರಸ್ತಿಗೆ ಪರಿಹಾರ ನೀಡಬೇಕೆಂದು ಸುಧಾಕರ್ ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು