9:01 PM Monday30 - March 2026
ಬ್ರೇಕಿಂಗ್ ನ್ಯೂಸ್
ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ…

ಇತ್ತೀಚಿನ ಸುದ್ದಿ

ಹುಲಿ ದಾಳಿಗೆ 3 ಹಸುಗಳು ಬಲಿ: ಕಾಫಿನಾಡಲ್ಲಿ ಮುಂದುವರೆದ ವ್ಯಾಘ್ರ ಅಟ್ಟಹಾಸ; ಕೈಕಟ್ಟಿ ಕುಳಿತ ಅರಣ್ಯ ಇಲಾಖೆ

26/11/2022, 21:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಭಾರತಿಬ್ಯೆಲು ಕನ್ನಗೆರೆ ಕಣ್ಣ ಕಾಫಿ ಎಸ್ಟೇಟ್ ನಲ್ಲಿ ಶುಕ್ರವಾರ ರಾತ್ರಿ ಸಮಯದಲ್ಲಿ ಹುಲಿ ಸುಮಾರು 4 ಹಸುಗಳನ್ನು ಬೇಟೆಯಾಡಿದ್ದು,ಇದರಲ್ಲಿ ಒಂದು ಕರು ಕೂಡ ಸೇರಿದೆ.

ಇವುಗಳಲ್ಲಿ ಒಂದು ಹಸು ಜೀವ ಉಳಿಸಿಕೊಂಡು ಕನ್ನಗೆರೆ ಗ್ರಾಮಕ್ಕೆ ಓಡಿ ಬಂದಿದೆ. ಇನ್ನೆರಡು ಹಸುಹಾಗು ಒಂದು ಕರು ಪ್ರಾಣ ಬಿಟ್ಟಿದ್ದು ಒಂದನ್ನು ಭಾಗಶಃ ತಿಂದು ಹಾಕಿದೆ.

ಅದರಲ್ಲಿ ಒಂದು ಹಸು ಗರ್ಭ ಧರಿಸಿದ್ದು ಹೊಟ್ಟೆಯಿಂದ ಕರವನ್ನು ಹೊರಹಾಕಿ ತಿಂದಿರುವ ಭಯಾನಕ ದೃಶ್ಯವನ್ನು ಗ್ರಾಮಸ್ಥರು ಕಂಡು ಬೆಚ್ಚಿಬಿದ್ದಿದ್ದಾರೆ. ಈ ಭಾಗದಲ್ಲಿ ಕಳೆದ ಕೆಲವು ದಿವಸಗಳಿಂದ ಎರಡು ಹುಲಿಗಳು ಸಂಚರಿಸುತ್ತಿದ್ದು, ಅನೇಕ ಹಸುಗಳನ್ನು ಇದುವರೆಗೂ ಬೇಟೆಯಾಡಿರುವ ವರದಿಯಾಗಿದೆ.

ಕೂಡಲೇ ಜೀವಹಾನಿ ಸಂಭವಿಸುವ ಮುಂಚೆ ಈ ಹುಲಿಗಳನ್ನು ಹಿಡಿದು ಸ್ಥಳಾಂತರಿಸಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಅಗ್ರಹಿಸಿದ್ದಾರೆ.
ಉಪವಲಯ ಅರಣ್ಯ ಅಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೋಹಸೀನ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು