7:27 AM Monday24 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಹುಲಿ ದಾಳಿಗೆ 3 ಹಸುಗಳು ಬಲಿ: ಕಾಫಿನಾಡಲ್ಲಿ ಮುಂದುವರೆದ ವ್ಯಾಘ್ರ ಅಟ್ಟಹಾಸ; ಕೈಕಟ್ಟಿ ಕುಳಿತ ಅರಣ್ಯ ಇಲಾಖೆ

26/11/2022, 21:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಭಾರತಿಬ್ಯೆಲು ಕನ್ನಗೆರೆ ಕಣ್ಣ ಕಾಫಿ ಎಸ್ಟೇಟ್ ನಲ್ಲಿ ಶುಕ್ರವಾರ ರಾತ್ರಿ ಸಮಯದಲ್ಲಿ ಹುಲಿ ಸುಮಾರು 4 ಹಸುಗಳನ್ನು ಬೇಟೆಯಾಡಿದ್ದು,ಇದರಲ್ಲಿ ಒಂದು ಕರು ಕೂಡ ಸೇರಿದೆ.

ಇವುಗಳಲ್ಲಿ ಒಂದು ಹಸು ಜೀವ ಉಳಿಸಿಕೊಂಡು ಕನ್ನಗೆರೆ ಗ್ರಾಮಕ್ಕೆ ಓಡಿ ಬಂದಿದೆ. ಇನ್ನೆರಡು ಹಸುಹಾಗು ಒಂದು ಕರು ಪ್ರಾಣ ಬಿಟ್ಟಿದ್ದು ಒಂದನ್ನು ಭಾಗಶಃ ತಿಂದು ಹಾಕಿದೆ.

ಅದರಲ್ಲಿ ಒಂದು ಹಸು ಗರ್ಭ ಧರಿಸಿದ್ದು ಹೊಟ್ಟೆಯಿಂದ ಕರವನ್ನು ಹೊರಹಾಕಿ ತಿಂದಿರುವ ಭಯಾನಕ ದೃಶ್ಯವನ್ನು ಗ್ರಾಮಸ್ಥರು ಕಂಡು ಬೆಚ್ಚಿಬಿದ್ದಿದ್ದಾರೆ. ಈ ಭಾಗದಲ್ಲಿ ಕಳೆದ ಕೆಲವು ದಿವಸಗಳಿಂದ ಎರಡು ಹುಲಿಗಳು ಸಂಚರಿಸುತ್ತಿದ್ದು, ಅನೇಕ ಹಸುಗಳನ್ನು ಇದುವರೆಗೂ ಬೇಟೆಯಾಡಿರುವ ವರದಿಯಾಗಿದೆ.

ಕೂಡಲೇ ಜೀವಹಾನಿ ಸಂಭವಿಸುವ ಮುಂಚೆ ಈ ಹುಲಿಗಳನ್ನು ಹಿಡಿದು ಸ್ಥಳಾಂತರಿಸಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಅಗ್ರಹಿಸಿದ್ದಾರೆ.
ಉಪವಲಯ ಅರಣ್ಯ ಅಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೋಹಸೀನ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು