4:17 AM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಹುಬ್ಬಳ್ಳಿ ಹಿಂಸಾಚಾರ ಪ್ರಕರಣ: 46ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ; ನಿಷೇಧಾಜ್ಞೆ ಜಾರಿ

17/04/2022, 21:33

ಹುಬ್ಬಳ್ಳಿ(reporterkarnataka.com);
ಪ್ರಾರ್ಥನಾ ಮಂದಿರದ ಎಡಿಟೆಡ್ ಚಿತ್ರವನ್ನು ಯುವಕನೊಬ್ಬ ಸ್ಟೇಟಸ್ ನಲ್ಲಿ ಹಾಕಿದಕ್ಕೆ ಸಂಬಂಧಿಸಿದಂತೆ ಹುಬ್ಬಳಿಯಲ್ಲಿ ಶನಿವಾರ ತಡರಾತ್ರಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 46ಕ್ಕೂಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶನಿವಾರ ತಡರಾತ್ರಿ ಕಲ್ಲು ತೂರಾಟ ಕಲ್ಲು ತೂರಾಟ ನಡೆಸಲಾಗಿದೆ. ಸಮೀಪದ ಆಸ್ಪತ್ರೆಯ ಮೇಲೂ ದಾಳಿ ನಡೆಸಲಾಗಿದೆ. ಹಿಂಸಾಚಾರದಲ್ಲಿ ಸಂಚಾರಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಗಲಭೆಕೋರರನ್ನು ಚದುರಿಸಲು ಪೊಲೀಸರು ಆಶ್ರುವಾಯು ಪ್ರಯೋಗಿಸಿದ್ದರು .ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇದು ವಿವಾದಕ್ಕೆ ಕಾರಣವಾದ ಪೋಸ್ಟ್‌ ಮಾಡಿದ್ದ ಆರೋಪದ ಮೇಲೆ ಅಭಿಷೇಕ್‌ ಹಿರೇಮಠ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ.

ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆ ಸಮೀಪದಲ್ಲಿಯೇ ಕಲ್ಲುತೂರಾಟ ನಡೆದಿದ್ದು, ಸಮೀಪದ ಆಸ್ಪತ್ರೆ ಮೇಲೂ ದಾಳಿಯಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು. ಅಶ್ರುವಾಯು ಪ್ರಯೋಗಿಸಿದರು. ಘಟನೆಯಲ್ಲಿ ಪೊಲೀಸ್‌ ವಾಹನಗಳು ಜಖಂಗೊಂಡಿವೆ. ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣ ಕ್ರಮವಾಗಿ ನಿಷೇಧಾಜ್ಞೆ ವಿಧಿಸಲಾಗಿದೆ.

ಪೊಲೀಸ್‌ ಕಮಿಷನರ್‌ ಲಾಭೂರಾಮ್‌ ಅವರು ಸಮುದಾಯದ ಮುಖಂಡರ ಜೊತೆ ಸಮಾಲೋಚನೆ ನಡೆಸಿ ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದರು. ಘಟನೆ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಘಟನೆ ನಡೆದ ಸುತ್ತಲಿನ ಪ್ರದೇಶದಲ್ಲಿದ್ದ ಬೈಕ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಲಾಭೂರಾಮ್‌ ತಡರಾತ್ರಿವರೆಗೆ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನೀಡಿದರು.

ನಿಯೋಜನೆ: ನಗರದ ಪ್ರಮುಖ ಧಾರ್ಮಿಕ ಸ್ಥಳಗಳ ಎದುರು ಹೆಚ್ಚುವರಿ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಭಾನುವಾರ ಹೊರ ಜಿಲ್ಲೆಗಳಿಂದಲೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಕರೆಸಿಕೊಳ್ಳಲು ಪೊಲೀಸ್ ಇಲಾಖೆ ನಿರ್ಧರಿಸಿದೆ.

ಮುಂಜಾಗ್ರತಾ ಕ್ರಮವಾಗಿ ಭದ್ರಾವತಿಯ ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ಕರೆಸಿಕೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ. ಭಾನುವಾರ ರಜೆ ಮೇಲೆ ಹೋದ ಸಿಬ್ಬಂದಿಗೂ ಕರ್ತವ್ಯಕ್ಕೆ ಮರಳಲು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು