12:23 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಹುಬ್ಬಳ್ಳಿ ಹಿಂಸಾಚಾರ ಪ್ರಕರಣ: 46ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ; ನಿಷೇಧಾಜ್ಞೆ ಜಾರಿ

17/04/2022, 21:33

ಹುಬ್ಬಳ್ಳಿ(reporterkarnataka.com);
ಪ್ರಾರ್ಥನಾ ಮಂದಿರದ ಎಡಿಟೆಡ್ ಚಿತ್ರವನ್ನು ಯುವಕನೊಬ್ಬ ಸ್ಟೇಟಸ್ ನಲ್ಲಿ ಹಾಕಿದಕ್ಕೆ ಸಂಬಂಧಿಸಿದಂತೆ ಹುಬ್ಬಳಿಯಲ್ಲಿ ಶನಿವಾರ ತಡರಾತ್ರಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 46ಕ್ಕೂಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶನಿವಾರ ತಡರಾತ್ರಿ ಕಲ್ಲು ತೂರಾಟ ಕಲ್ಲು ತೂರಾಟ ನಡೆಸಲಾಗಿದೆ. ಸಮೀಪದ ಆಸ್ಪತ್ರೆಯ ಮೇಲೂ ದಾಳಿ ನಡೆಸಲಾಗಿದೆ. ಹಿಂಸಾಚಾರದಲ್ಲಿ ಸಂಚಾರಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಗಲಭೆಕೋರರನ್ನು ಚದುರಿಸಲು ಪೊಲೀಸರು ಆಶ್ರುವಾಯು ಪ್ರಯೋಗಿಸಿದ್ದರು .ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇದು ವಿವಾದಕ್ಕೆ ಕಾರಣವಾದ ಪೋಸ್ಟ್‌ ಮಾಡಿದ್ದ ಆರೋಪದ ಮೇಲೆ ಅಭಿಷೇಕ್‌ ಹಿರೇಮಠ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ.

ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆ ಸಮೀಪದಲ್ಲಿಯೇ ಕಲ್ಲುತೂರಾಟ ನಡೆದಿದ್ದು, ಸಮೀಪದ ಆಸ್ಪತ್ರೆ ಮೇಲೂ ದಾಳಿಯಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು. ಅಶ್ರುವಾಯು ಪ್ರಯೋಗಿಸಿದರು. ಘಟನೆಯಲ್ಲಿ ಪೊಲೀಸ್‌ ವಾಹನಗಳು ಜಖಂಗೊಂಡಿವೆ. ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣ ಕ್ರಮವಾಗಿ ನಿಷೇಧಾಜ್ಞೆ ವಿಧಿಸಲಾಗಿದೆ.

ಪೊಲೀಸ್‌ ಕಮಿಷನರ್‌ ಲಾಭೂರಾಮ್‌ ಅವರು ಸಮುದಾಯದ ಮುಖಂಡರ ಜೊತೆ ಸಮಾಲೋಚನೆ ನಡೆಸಿ ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದರು. ಘಟನೆ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಘಟನೆ ನಡೆದ ಸುತ್ತಲಿನ ಪ್ರದೇಶದಲ್ಲಿದ್ದ ಬೈಕ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಲಾಭೂರಾಮ್‌ ತಡರಾತ್ರಿವರೆಗೆ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನೀಡಿದರು.

ನಿಯೋಜನೆ: ನಗರದ ಪ್ರಮುಖ ಧಾರ್ಮಿಕ ಸ್ಥಳಗಳ ಎದುರು ಹೆಚ್ಚುವರಿ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಭಾನುವಾರ ಹೊರ ಜಿಲ್ಲೆಗಳಿಂದಲೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಕರೆಸಿಕೊಳ್ಳಲು ಪೊಲೀಸ್ ಇಲಾಖೆ ನಿರ್ಧರಿಸಿದೆ.

ಮುಂಜಾಗ್ರತಾ ಕ್ರಮವಾಗಿ ಭದ್ರಾವತಿಯ ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ಕರೆಸಿಕೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ. ಭಾನುವಾರ ರಜೆ ಮೇಲೆ ಹೋದ ಸಿಬ್ಬಂದಿಗೂ ಕರ್ತವ್ಯಕ್ಕೆ ಮರಳಲು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು