6:26 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಮುಂದಿನ ತಿಂಗಳಿನಿಂದ ಆರಂಭ

08/04/2022, 23:56

ಹೊಸದಿಲ್ಲಿ(reporterkarnataka.com): ಹುಬ್ಬಳ್ಳಿ -ಧಾರವಾಡ ಅವಳಿ ನಗರಗಳ ವಿಮಾನಯಾನ ಪ್ರಯಾಣಿಕರಿಗೆ ಶುಭ ಸುದ್ದಿಯೊಂದು ಹೊರ ಬಿದ್ದಿದೆ. ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಮೇ 1ರಿಂದ ಆರಂಭವಾಗಲಿದೆ.

ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಆರಂಭಿಸಲು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ  ಪ್ರಲ್ಹಾದ ಜೋಶಿಯವರು ಇಂಡಿಗೋ ವಿಮಾನಯಾನ ಸಂಸ್ಥೆಗೆ ಮನವಿ ಮಾಡಿದ್ದರು. ಸಚಿವರ ಮನವಿಗೆ ಸ್ಪಂದಿಸಿದ ಇಂಡಿಗೋ ಸಂಸ್ಥೆಯವರು ಇದೇ ಮೇ 1ರಿಂದ ವಾರದಲ್ಲಿ 4 ದಿನ ಮಂಗಳೂರಿಗೆ ಮತ್ತು ಮೇ 3ರಿಂದ ವಾರದಲ್ಲಿ 3 ದಿನ ಮೈಸೂರಿಗೆ ವಿಮಾನ ಹಾರಾಟ ಪ್ರಾರಂಭಿಸಲಿದ್ದಾರೆ ಎಂದು ಸಚಿವರ ದೆಹಲಿ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸುಸಜ್ಜಿತ ನಿಲ್ದಾಣವನ್ನಾಗಿ ಮಾರ್ಪಡಿಸಿದೆ. ಹುಬ್ಬಳ್ಳಿಯಿಂದ ಮೈಸೂರು, ಮಂಗಳೂರು ನಗರಗಳಿಗೆ ವಿಮಾನ ಯಾನ ಸೇವೆ ಅವಶ್ಯಕತೆ ಇತ್ತು. ಬಹುದಿನ ಬೇಡಿಕೆಗೆ ಇಂದು ಚಾಲನೆ ನೀಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಇದನ್ನು ಸಾಧ್ಯವಾಗಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಮತ್ತು ಇಂಡಿಗೋದ ಆಡಳಿತ ವರ್ಗಕ್ಕೆ ಸಚಿವ ಜೋಶಿಯವರು ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು