ಇತ್ತೀಚಿನ ಸುದ್ದಿ
ಚಿಕ್ಕಮಗಳೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ: 1 ಸಾವಿರ ಅಡಿ ಉದ್ದದ ತ್ರಿವರ್ಣ ಧ್ವಜ ಮೆರವಣಿಗೆ
16/05/2025, 22:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಆಪರೇಷನ್ ಸಿಂಧೂರ ಹಾಗೂ ಭಾರತೀಯ ಸೈನಿಕರನ್ನು ಬೆಂಬಲಿಸಿ ಬೃಹತ್ ತಿರಂಗಾ ಯಾತ್ರೆ ಚಿಕ್ಕಮಗಳೂರು ನಗರದಲ್ಲಿ ಶುಕ್ರವಾರ ನಡೆಯಿತು.
1000 ಅಡಿ ಉದ್ದದ ತಿರಂಗಾ ಬಾವುಟ ಹಿಡಿದು ಬೃಹತ್ ಮೆರವಣಿಗೆ ನಡೆಸಲಾಯಿತು.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ನೇತೃತ್ವದಲ್ಲಿ
ಚಿಕ್ಕಮಗಳೂರಿನ ಓಂಕಾರೇಶ್ವರ ದೇಗುಲದಿಂದ ಎಂ.ಜಿ.ರಸ್ತೆ ಮೂಲಕ ಆಜಾದ್ ಪಾರ್ಕ್ ವೃತ್ತದವರೆಗೆ ಮೆರವಣಿಗೆ ಸಾಗಿತು. ತಿರಂಗಾ ಯಾತ್ರೆಯಲ್ಲಿ 2000ಕ್ಕೂ ಹೆಚ್ಚು ಜನಸಾಮಾನ್ಯರು ಭಾಗವಹಿಸಿದ್ದರು. ಮಾಜಿ ಸೈನಿಕರೂ ಪಾಲ್ಗೊಂಡಿದ್ದರು.
ರಾಷ್ಟ್ರಭಕ್ತಿ ಗೀತೆಗಳ ಮೂಲಕ ಬೃಹತ್ ಮೆರವಣಿಗೆ ಸಾಗಿತು.
ನಗರದ ಆಜಾದ್ ಪಾರ್ಕ್ ನಲ್ಲಿ ಮೆರವಣಿಗೆ ಸಮಾಪನಗೊಂಡಿತು.