5:47 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಹುಲ್ಲಹಳ್ಳಿಯಲ್ಲಿ ಅಪರಾಧ ತಡೆ ಮಾಸಾಚರಣೆ ಜಾಗೃತಿ ಕಾರ್ಯಕ್ರಮ: ಎಎಸ್ಐ ಶಿವಣ್ಣ ಮತ್ತು ದೊಡ್ಡಯ್ಯ ಅವರಿಂದ ಜಾಗೃತಿ

12/12/2023, 18:21

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಕಾರು ಚಾಲಕರು ಸೀಟ್ ಬೆಲ್ಟ್ ಹಾಕಬೇಕು. ನಾಲ್ಕು ಚಕ್ರ ಹಾಗೂ ದೊಡ್ಡ ವಾಹನದ ಚಾಲಕರು ಸರ್ಕಾರ ಜಾರಿ ಮಾಡಿರುವ ಸಂಚಾರಿ ನಿಯಮವನ್ನು ಪಾಲನೆ ಮಾಡಬೇಕು. ನಮ್ಮ ಜೀವವನ್ನು ರಕ್ಷಿಸಿಕೊಳ್ಳಬೇಕು, ಮತ್ತೊಬ್ಬರ ಜೀವವನ್ನು ಸುರಕ್ಷತೆಗೊಳಿಸಬೇಕು ಎಂದು ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಆಟೋ ಚಾಲಕರಿಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ಶಿವಣ್ಣ ಮತ್ತು ದೊಡ್ಡಯ್ಯ ನೀತಿ ಪಾಠ ಹೇಳಿ ಸಂಚಾರಿ ನಿಯಮವನ್ನು ಪಾಲನೆ ಮಾಡಲು ಜಾಗೃತಿ ಮೂಡಿಸಿದರು.
ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಆದೇಶದ ಮೇರೆಗೆ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ವೃತ್ತ ನಿರೀಕ್ಷಕ ಬಸವರಾಜು ರವರ ಮಾರ್ಗದರ್ಶನದಲ್ಲಿ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರ್ಕಿ ಕಟ್ಟೆ ಅವರ ನೇತೃತ್ವದಲ್ಲಿ ಅಪರಾಧ ತಡೆ ಮಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪೊಲೀಸ್ ಇಲಾಖೆ ಸಿಬ್ಬಂದಿಗಳಾದ ನಾವು ಕಾನೂನು ಪಾಲನೆ ಮಾಡುವ ಸಲುವಾಗಿ ತಮಗೆ ಇಲಾಖೆ ತೋರುವ ಎಲ್ಲಾ ನೀತಿ ನಿಯಮ ಸಲಹೆಗಳನ್ನು ನೀಡುತ್ತಿದ್ದೇವೆ ಯಾರೇ ಆಗಲಿ ಕಾನೂನು ಪಾಲನೆ ಮಾಡಿ. ಕಾನೂನಿನ ಅರಿವನ್ನು ನೀವು ಅಳವಡಿಸಿಕೊಳ್ಳಬೇಕು ಮತ್ತೊಬ್ಬರಿಗೂ ತಿಳಿ ಹೆಳಬೇಕು ಎಂಬ ಸದ್ದು ದೇಶದಿಂದ ನಿರಂತರವಾಗಿ ಹುಲ್ಲಹಳ್ಳಿ ಹೋಬಳಿ ಕೇಂದ್ರದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ನಡೆಸಲಾಗುತ್ತದೆ ಎಂದು ಸಂದರ್ಭದಲ್ಲಿ ಆಟೋ ಚಾಲಕರು ಮತ್ತು ವಾಹನ ಚಾಲಕರ ಜೊತೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸಂದರ್ಭದಲ್ಲಿ ಎಎಸ್ಐ ಶಿವಣ್ಣ ದಫೆದರ್ ದೊಡ್ಡಯ್ಯ ಸರಿದಂತೆ ಸಾಕಷ್ಟು ಸಿಬ್ಬಂದಿಗಳು ಆಟೋ ಚಾಲಕರು ಮತ್ತು ವಾಹನ ಚಾಲಕರು ಸಾರ್ವಜನಿಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು