3:19 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಹುಲ್ಲಹಳ್ಳಿಯಲ್ಲಿ ಅಪರಾಧ ತಡೆ ಮಾಸಾಚರಣೆ ಜಾಗೃತಿ ಕಾರ್ಯಕ್ರಮ: ಎಎಸ್ಐ ಶಿವಣ್ಣ ಮತ್ತು ದೊಡ್ಡಯ್ಯ ಅವರಿಂದ ಜಾಗೃತಿ

12/12/2023, 18:21

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಕಾರು ಚಾಲಕರು ಸೀಟ್ ಬೆಲ್ಟ್ ಹಾಕಬೇಕು. ನಾಲ್ಕು ಚಕ್ರ ಹಾಗೂ ದೊಡ್ಡ ವಾಹನದ ಚಾಲಕರು ಸರ್ಕಾರ ಜಾರಿ ಮಾಡಿರುವ ಸಂಚಾರಿ ನಿಯಮವನ್ನು ಪಾಲನೆ ಮಾಡಬೇಕು. ನಮ್ಮ ಜೀವವನ್ನು ರಕ್ಷಿಸಿಕೊಳ್ಳಬೇಕು, ಮತ್ತೊಬ್ಬರ ಜೀವವನ್ನು ಸುರಕ್ಷತೆಗೊಳಿಸಬೇಕು ಎಂದು ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಆಟೋ ಚಾಲಕರಿಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ಶಿವಣ್ಣ ಮತ್ತು ದೊಡ್ಡಯ್ಯ ನೀತಿ ಪಾಠ ಹೇಳಿ ಸಂಚಾರಿ ನಿಯಮವನ್ನು ಪಾಲನೆ ಮಾಡಲು ಜಾಗೃತಿ ಮೂಡಿಸಿದರು.
ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಆದೇಶದ ಮೇರೆಗೆ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ವೃತ್ತ ನಿರೀಕ್ಷಕ ಬಸವರಾಜು ರವರ ಮಾರ್ಗದರ್ಶನದಲ್ಲಿ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರ್ಕಿ ಕಟ್ಟೆ ಅವರ ನೇತೃತ್ವದಲ್ಲಿ ಅಪರಾಧ ತಡೆ ಮಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪೊಲೀಸ್ ಇಲಾಖೆ ಸಿಬ್ಬಂದಿಗಳಾದ ನಾವು ಕಾನೂನು ಪಾಲನೆ ಮಾಡುವ ಸಲುವಾಗಿ ತಮಗೆ ಇಲಾಖೆ ತೋರುವ ಎಲ್ಲಾ ನೀತಿ ನಿಯಮ ಸಲಹೆಗಳನ್ನು ನೀಡುತ್ತಿದ್ದೇವೆ ಯಾರೇ ಆಗಲಿ ಕಾನೂನು ಪಾಲನೆ ಮಾಡಿ. ಕಾನೂನಿನ ಅರಿವನ್ನು ನೀವು ಅಳವಡಿಸಿಕೊಳ್ಳಬೇಕು ಮತ್ತೊಬ್ಬರಿಗೂ ತಿಳಿ ಹೆಳಬೇಕು ಎಂಬ ಸದ್ದು ದೇಶದಿಂದ ನಿರಂತರವಾಗಿ ಹುಲ್ಲಹಳ್ಳಿ ಹೋಬಳಿ ಕೇಂದ್ರದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ನಡೆಸಲಾಗುತ್ತದೆ ಎಂದು ಸಂದರ್ಭದಲ್ಲಿ ಆಟೋ ಚಾಲಕರು ಮತ್ತು ವಾಹನ ಚಾಲಕರ ಜೊತೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸಂದರ್ಭದಲ್ಲಿ ಎಎಸ್ಐ ಶಿವಣ್ಣ ದಫೆದರ್ ದೊಡ್ಡಯ್ಯ ಸರಿದಂತೆ ಸಾಕಷ್ಟು ಸಿಬ್ಬಂದಿಗಳು ಆಟೋ ಚಾಲಕರು ಮತ್ತು ವಾಹನ ಚಾಲಕರು ಸಾರ್ವಜನಿಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು