5:38 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಹುಲ್ಲೂರು ತಾಂಡಾ: ಅಪ್ರಾಪ್ತ ಬಾಲಕಿಯ ಅತ್ಯಾಚಾರ; ಆರೋಪಿಗಳನ್ನು ಗಲ್ಲಿಗೇರಿಸಲು ಆಗ್ರಹ

15/12/2021, 18:17

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಹುಲ್ಲೂರು ತಾಂಡದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದು, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕೆಂದು ರಾಷ್ಟ್ರೀಯ ಗೋರ್ ಬಂಜಾರ್ ಕ್ರಾಂತಿ ಸಮಿತಿ ವಿಜಯನಗರ ಜಿಲ್ಲಾ ಘಟಕ ಆಗ್ರಹಿಸಿದೆ. 

ಪ್ರಕರಣ ವಿಜಯಪುರದ ಮಹಿಳಾ ಪೋಲಿಸ್ ಠಾಣೆಯಲ್ಲಿ ದೂರನ್ನು ದಾಖಲಿಸಲಾಗಿದೆ, ಆದರೆ ಆರೋಪಿಗಳನ್ನು ಬಂಧಿಸಿಲ್ಲ ಎಂದು ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದಂತೆ ಸೂಕ್ತ ಕ್ರಮಕ್ಕಾಗಿ ಮುಖ್ಯಮಂತ್ರಿಗಳಿಗೆ ಅವರು ಹಕ್ಕೊತ್ತಾಯ ಮಾಡಿದ್ದಾರೆ. ಹಕ್ಕೋತ್ತಾಯ ಪತ್ರವನ್ನು ಪದಾಧಿಕಾರಿಗಳು ಕೂಡ್ಲಿಗಿ ತಹಶಿಲ್ದಾರರಾದ ಟಿ.ಜಗಧೀಶರವರಿಗೆ ನೀಡಿದ್ದಾರೆ.

ಸಮಿತಿ ಮುಖಂಡರು ಮಾತನಾಡಿ,ಈ ಕೃತ್ಯದಲ್ಲಿ ಭಾಗಿಯಾದರೆನ್ನಲಾದ ಸಂಜು ಹುಲ್ಲೂರ ಮತ್ತು ಇತರರನ್ನು, ಈ ಕೂಡಲೆ ಬಂಧಿಸಿ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಿ ಕೂಡಲೆ ಗಲ್ಲು ಶಿಕ್ಷೆ ನೀಡಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಂತ್ರಸ್ತ ಯುವತಿಯ ಕುಟುಂಬಕ್ಕೆ ಸರ್ಕಾರದಿಂದ ಹಾಗೂ ಜಿಲ್ಲಾಡಳಿತದಿಂದ ಕನಿಷ್ಠ 50 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು. ನಿರ್ಲಕ್ಷ್ಯ ತೋರಿದ್ದಲ್ಲಿ ಸಮಿತಿ ರಾಜ್ಯಾದ್ಯಂತ ತೀವ್ರ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗುತ್ತಿದೆ ಪದಾಧಿಕಾರಿಗಳು ಎಚ್ಚರಿಸಿದರು.

ರಾಷ್ಟ್ರೀಯ ಗೋರ್ ಬಂಜಾರ ಕ್ರಾಂತಿ ವಿಜಯನಗರ ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ಶಿವಕುಮಾರ್,ಉಪಾಧ್ಯಕ್ಷ ಎಲ್.ವಿನಾಯಕ ಎಲ್ ಎಸ್ ಮಾತನಾಡಿದರು. ಸಮಿತಿ ಪದಾಧಿಕಾರಿಗಳು ಹಾಗೂ ಕೂಡ್ಲಿಗಿ ತಾಲ್ಲೂಕಿನ ಪದಾಧಿಕಾರಿಗಳು. ವಿಧ್ಯಾರ್ಥಿಗಳಾದ ಅಕ್ರಮ ಭಾಷಾ. ಗುರುರಾಜ್. ನಾಗರಾಜ್,  ಮಹೇಶ್, ಪ್ರಜ್ವಲ್, ಬಸವರಾಜ್,  ಅಜಯ್ ಪರಶುರಾಮ್, ವಿನೋದ್, ಮಂಜುನಾಥ್. ಇನ್ನಿತರ ವಿಧ್ಯಾರ್ಥಿಗಳು ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು