1:45 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಹುಲ್ಲೂರು ತಾಂಡಾ: ಅಪ್ರಾಪ್ತ ಬಾಲಕಿಯ ಅತ್ಯಾಚಾರ; ಆರೋಪಿಗಳನ್ನು ಗಲ್ಲಿಗೇರಿಸಲು ಆಗ್ರಹ

15/12/2021, 18:17

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಹುಲ್ಲೂರು ತಾಂಡದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದು, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕೆಂದು ರಾಷ್ಟ್ರೀಯ ಗೋರ್ ಬಂಜಾರ್ ಕ್ರಾಂತಿ ಸಮಿತಿ ವಿಜಯನಗರ ಜಿಲ್ಲಾ ಘಟಕ ಆಗ್ರಹಿಸಿದೆ. 

ಪ್ರಕರಣ ವಿಜಯಪುರದ ಮಹಿಳಾ ಪೋಲಿಸ್ ಠಾಣೆಯಲ್ಲಿ ದೂರನ್ನು ದಾಖಲಿಸಲಾಗಿದೆ, ಆದರೆ ಆರೋಪಿಗಳನ್ನು ಬಂಧಿಸಿಲ್ಲ ಎಂದು ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದಂತೆ ಸೂಕ್ತ ಕ್ರಮಕ್ಕಾಗಿ ಮುಖ್ಯಮಂತ್ರಿಗಳಿಗೆ ಅವರು ಹಕ್ಕೊತ್ತಾಯ ಮಾಡಿದ್ದಾರೆ. ಹಕ್ಕೋತ್ತಾಯ ಪತ್ರವನ್ನು ಪದಾಧಿಕಾರಿಗಳು ಕೂಡ್ಲಿಗಿ ತಹಶಿಲ್ದಾರರಾದ ಟಿ.ಜಗಧೀಶರವರಿಗೆ ನೀಡಿದ್ದಾರೆ.

ಸಮಿತಿ ಮುಖಂಡರು ಮಾತನಾಡಿ,ಈ ಕೃತ್ಯದಲ್ಲಿ ಭಾಗಿಯಾದರೆನ್ನಲಾದ ಸಂಜು ಹುಲ್ಲೂರ ಮತ್ತು ಇತರರನ್ನು, ಈ ಕೂಡಲೆ ಬಂಧಿಸಿ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಿ ಕೂಡಲೆ ಗಲ್ಲು ಶಿಕ್ಷೆ ನೀಡಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಂತ್ರಸ್ತ ಯುವತಿಯ ಕುಟುಂಬಕ್ಕೆ ಸರ್ಕಾರದಿಂದ ಹಾಗೂ ಜಿಲ್ಲಾಡಳಿತದಿಂದ ಕನಿಷ್ಠ 50 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು. ನಿರ್ಲಕ್ಷ್ಯ ತೋರಿದ್ದಲ್ಲಿ ಸಮಿತಿ ರಾಜ್ಯಾದ್ಯಂತ ತೀವ್ರ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗುತ್ತಿದೆ ಪದಾಧಿಕಾರಿಗಳು ಎಚ್ಚರಿಸಿದರು.

ರಾಷ್ಟ್ರೀಯ ಗೋರ್ ಬಂಜಾರ ಕ್ರಾಂತಿ ವಿಜಯನಗರ ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ಶಿವಕುಮಾರ್,ಉಪಾಧ್ಯಕ್ಷ ಎಲ್.ವಿನಾಯಕ ಎಲ್ ಎಸ್ ಮಾತನಾಡಿದರು. ಸಮಿತಿ ಪದಾಧಿಕಾರಿಗಳು ಹಾಗೂ ಕೂಡ್ಲಿಗಿ ತಾಲ್ಲೂಕಿನ ಪದಾಧಿಕಾರಿಗಳು. ವಿಧ್ಯಾರ್ಥಿಗಳಾದ ಅಕ್ರಮ ಭಾಷಾ. ಗುರುರಾಜ್. ನಾಗರಾಜ್,  ಮಹೇಶ್, ಪ್ರಜ್ವಲ್, ಬಸವರಾಜ್,  ಅಜಯ್ ಪರಶುರಾಮ್, ವಿನೋದ್, ಮಂಜುನಾಥ್. ಇನ್ನಿತರ ವಿಧ್ಯಾರ್ಥಿಗಳು ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು