8:38 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

ಹುಣಸಗಿ: ವಿದ್ಯಾನಂದ ಶರಣರ 18ನೇ ವರ್ಷದ ಪುಣ್ಯಸ್ಮರಣೆ; ಸತ್ಸಂಗ ಸಂಜೀವಿನಿ ಕೂಟ

03/07/2024, 14:05

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬೆನಕನಹಳ್ಳಿ ಮಹಾಬೋಧಾಲಯ ಮಠದಲ್ಲಿ ಇಂದು ಶ್ರೀ ವಿದ್ಯಾನಂದ ಶರಣರ 18ನೇ ವರ್ಷದ ಪುಣ್ಯಸ್ಮರಣೆ ನಿಮಿತ್ತ ಸತ್ಸಂಗ ಸಂಜೀವಿನಿ ಕೂಟ ಏರ್ಪಡಿಸಲಾಗಿತ್ತು.


ಈ ಸತ್ಸಂಗ ಸಂಜೀವಿನಿ ಕೂಟ ಮೂರು ದಿನಗಳ ಕಾಲ ನಡೆಯಲಿದ್ದು, ಬೆನಕನಹಳ್ಳಿ ಮಠಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಶರಣರ ಹಿತ ವಚನಗಳನ್ನು ಆಲಿಸುತ್ತಾರೆ.
ಸುತ್ತಮುತ್ತಲಿನ ಗ್ರಾಮದಿಂದ ಆಗಮಿಸುತ್ತಿರುವ ಭಕ್ತಾದಿಗಳಿಗೆ ಪ್ರವಚನ ನೀಡಲು ಅನೇಕ ಮಠಾಧಿಪತಿಗಳು ಗುರುಗಳು ಆಗಮಿಸುತ್ತಾರೆ. ಕಾರ್ಯಕ್ರಮಕ್ಕೆ ಮಾತೊ ಶ್ರೀ ದೇವಿತಾಯಿ, ಮನೋಹರ ರಾವ್ ಕುಲಕರ್ಣಿ, ಕೃಷ್ಣಾನಂದ ಶಾಸ್ತ್ರಿ, ಶಂಕ್ರಣ್ಣ ಹುಣಶ್ಯಾಳ ಹಾಗೂ ಪರಮಪೂಜ ಈ ದೇವಾನಂದ ಶರಣರು ಮಹಾಭೋದಾಲಯ ಬೆನಕನಹಳ್ಳಿ ಮೂರು ದಿನಗಳ ವರೆಗೂ ನಡೆಯುವ ಈ ಸಂಜೀವಿನಿ ಕೂಟವು ಪ್ರತಿದಿನವೂ ಒಬ್ಬರು ಶರಣರು ಭಕ್ತಾದಿಗಳಿಗೆ ಪ್ರವಚನ ಮಾಡುತ್ತಿದ್ದಾರೆ. ಇಂದು ಮೂರನೇ ದಿನವಾದ್ದರಿಂದ ಬಹಳ ವಿಶೇಷ ಪೂಜೆ ನಡೆಯುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಪರಮಪೂಜ್ಯರ ಪ್ರವಚನವನ್ನು ಆಲಿಸುತ ಭಕ್ತಾದಿಗಳು ಮೈಮರೆಯುವಂತೆ ಕುಳಿತಿದ್ದರು. ಈ ಮಠದಲ್ಲಿ ದಿನನಿತ್ಯ ವಿವಿಧ ಬಗೆಯ ಪ್ರಸಾದವನ್ನು ಭಕ್ತರಿಗೆ ನೀಡಲಾಗುತ್ತಿತ್ತು. ಆದರೆ ಇಂದು ಕೊನೆಯ ದಿನ ಪ್ರಯುಕ್ತ ಶೇಂಗಾ ಹೋಳಿಗೆ ವಿಶೇಷವಾಗಿ ನೀಡಲಾಯಿತು. ಶ್ರೀ ಸಂಜೀವಿನಿ ಕೂಟದಲ್ಲಿ ಸಹಸ್ರಾರು ಭಕ್ತಾದಿಗಳು ಬೆನಕನಹಳ್ಳಿ ಹೆಬ್ಬಾಳ ಕ್ಕೆ ಗ್ರಾಮದ ಮುಖಂಡರು ಮಠದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು