3:09 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಹುಣಸಗಿ: ವಿದ್ಯಾನಂದ ಶರಣರ 18ನೇ ವರ್ಷದ ಪುಣ್ಯಸ್ಮರಣೆ; ಸತ್ಸಂಗ ಸಂಜೀವಿನಿ ಕೂಟ

03/07/2024, 14:05

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬೆನಕನಹಳ್ಳಿ ಮಹಾಬೋಧಾಲಯ ಮಠದಲ್ಲಿ ಇಂದು ಶ್ರೀ ವಿದ್ಯಾನಂದ ಶರಣರ 18ನೇ ವರ್ಷದ ಪುಣ್ಯಸ್ಮರಣೆ ನಿಮಿತ್ತ ಸತ್ಸಂಗ ಸಂಜೀವಿನಿ ಕೂಟ ಏರ್ಪಡಿಸಲಾಗಿತ್ತು.


ಈ ಸತ್ಸಂಗ ಸಂಜೀವಿನಿ ಕೂಟ ಮೂರು ದಿನಗಳ ಕಾಲ ನಡೆಯಲಿದ್ದು, ಬೆನಕನಹಳ್ಳಿ ಮಠಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಶರಣರ ಹಿತ ವಚನಗಳನ್ನು ಆಲಿಸುತ್ತಾರೆ.
ಸುತ್ತಮುತ್ತಲಿನ ಗ್ರಾಮದಿಂದ ಆಗಮಿಸುತ್ತಿರುವ ಭಕ್ತಾದಿಗಳಿಗೆ ಪ್ರವಚನ ನೀಡಲು ಅನೇಕ ಮಠಾಧಿಪತಿಗಳು ಗುರುಗಳು ಆಗಮಿಸುತ್ತಾರೆ. ಕಾರ್ಯಕ್ರಮಕ್ಕೆ ಮಾತೊ ಶ್ರೀ ದೇವಿತಾಯಿ, ಮನೋಹರ ರಾವ್ ಕುಲಕರ್ಣಿ, ಕೃಷ್ಣಾನಂದ ಶಾಸ್ತ್ರಿ, ಶಂಕ್ರಣ್ಣ ಹುಣಶ್ಯಾಳ ಹಾಗೂ ಪರಮಪೂಜ ಈ ದೇವಾನಂದ ಶರಣರು ಮಹಾಭೋದಾಲಯ ಬೆನಕನಹಳ್ಳಿ ಮೂರು ದಿನಗಳ ವರೆಗೂ ನಡೆಯುವ ಈ ಸಂಜೀವಿನಿ ಕೂಟವು ಪ್ರತಿದಿನವೂ ಒಬ್ಬರು ಶರಣರು ಭಕ್ತಾದಿಗಳಿಗೆ ಪ್ರವಚನ ಮಾಡುತ್ತಿದ್ದಾರೆ. ಇಂದು ಮೂರನೇ ದಿನವಾದ್ದರಿಂದ ಬಹಳ ವಿಶೇಷ ಪೂಜೆ ನಡೆಯುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಪರಮಪೂಜ್ಯರ ಪ್ರವಚನವನ್ನು ಆಲಿಸುತ ಭಕ್ತಾದಿಗಳು ಮೈಮರೆಯುವಂತೆ ಕುಳಿತಿದ್ದರು. ಈ ಮಠದಲ್ಲಿ ದಿನನಿತ್ಯ ವಿವಿಧ ಬಗೆಯ ಪ್ರಸಾದವನ್ನು ಭಕ್ತರಿಗೆ ನೀಡಲಾಗುತ್ತಿತ್ತು. ಆದರೆ ಇಂದು ಕೊನೆಯ ದಿನ ಪ್ರಯುಕ್ತ ಶೇಂಗಾ ಹೋಳಿಗೆ ವಿಶೇಷವಾಗಿ ನೀಡಲಾಯಿತು. ಶ್ರೀ ಸಂಜೀವಿನಿ ಕೂಟದಲ್ಲಿ ಸಹಸ್ರಾರು ಭಕ್ತಾದಿಗಳು ಬೆನಕನಹಳ್ಳಿ ಹೆಬ್ಬಾಳ ಕ್ಕೆ ಗ್ರಾಮದ ಮುಖಂಡರು ಮಠದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು