6:09 AM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಹುಣಸಗಿ: ವಿದ್ಯಾನಂದ ಶರಣರ 18ನೇ ವರ್ಷದ ಪುಣ್ಯಸ್ಮರಣೆ; ಸತ್ಸಂಗ ಸಂಜೀವಿನಿ ಕೂಟ

03/07/2024, 14:05

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬೆನಕನಹಳ್ಳಿ ಮಹಾಬೋಧಾಲಯ ಮಠದಲ್ಲಿ ಇಂದು ಶ್ರೀ ವಿದ್ಯಾನಂದ ಶರಣರ 18ನೇ ವರ್ಷದ ಪುಣ್ಯಸ್ಮರಣೆ ನಿಮಿತ್ತ ಸತ್ಸಂಗ ಸಂಜೀವಿನಿ ಕೂಟ ಏರ್ಪಡಿಸಲಾಗಿತ್ತು.


ಈ ಸತ್ಸಂಗ ಸಂಜೀವಿನಿ ಕೂಟ ಮೂರು ದಿನಗಳ ಕಾಲ ನಡೆಯಲಿದ್ದು, ಬೆನಕನಹಳ್ಳಿ ಮಠಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಶರಣರ ಹಿತ ವಚನಗಳನ್ನು ಆಲಿಸುತ್ತಾರೆ.
ಸುತ್ತಮುತ್ತಲಿನ ಗ್ರಾಮದಿಂದ ಆಗಮಿಸುತ್ತಿರುವ ಭಕ್ತಾದಿಗಳಿಗೆ ಪ್ರವಚನ ನೀಡಲು ಅನೇಕ ಮಠಾಧಿಪತಿಗಳು ಗುರುಗಳು ಆಗಮಿಸುತ್ತಾರೆ. ಕಾರ್ಯಕ್ರಮಕ್ಕೆ ಮಾತೊ ಶ್ರೀ ದೇವಿತಾಯಿ, ಮನೋಹರ ರಾವ್ ಕುಲಕರ್ಣಿ, ಕೃಷ್ಣಾನಂದ ಶಾಸ್ತ್ರಿ, ಶಂಕ್ರಣ್ಣ ಹುಣಶ್ಯಾಳ ಹಾಗೂ ಪರಮಪೂಜ ಈ ದೇವಾನಂದ ಶರಣರು ಮಹಾಭೋದಾಲಯ ಬೆನಕನಹಳ್ಳಿ ಮೂರು ದಿನಗಳ ವರೆಗೂ ನಡೆಯುವ ಈ ಸಂಜೀವಿನಿ ಕೂಟವು ಪ್ರತಿದಿನವೂ ಒಬ್ಬರು ಶರಣರು ಭಕ್ತಾದಿಗಳಿಗೆ ಪ್ರವಚನ ಮಾಡುತ್ತಿದ್ದಾರೆ. ಇಂದು ಮೂರನೇ ದಿನವಾದ್ದರಿಂದ ಬಹಳ ವಿಶೇಷ ಪೂಜೆ ನಡೆಯುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಪರಮಪೂಜ್ಯರ ಪ್ರವಚನವನ್ನು ಆಲಿಸುತ ಭಕ್ತಾದಿಗಳು ಮೈಮರೆಯುವಂತೆ ಕುಳಿತಿದ್ದರು. ಈ ಮಠದಲ್ಲಿ ದಿನನಿತ್ಯ ವಿವಿಧ ಬಗೆಯ ಪ್ರಸಾದವನ್ನು ಭಕ್ತರಿಗೆ ನೀಡಲಾಗುತ್ತಿತ್ತು. ಆದರೆ ಇಂದು ಕೊನೆಯ ದಿನ ಪ್ರಯುಕ್ತ ಶೇಂಗಾ ಹೋಳಿಗೆ ವಿಶೇಷವಾಗಿ ನೀಡಲಾಯಿತು. ಶ್ರೀ ಸಂಜೀವಿನಿ ಕೂಟದಲ್ಲಿ ಸಹಸ್ರಾರು ಭಕ್ತಾದಿಗಳು ಬೆನಕನಹಳ್ಳಿ ಹೆಬ್ಬಾಳ ಕ್ಕೆ ಗ್ರಾಮದ ಮುಖಂಡರು ಮಠದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು