8:20 PM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್

28/11/2024, 20:55

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಬಸ್ ಸರಿಯಾದ ವೇಳೆಗೆ ಬಾರದನ್ನು ವಿರೋಧಿಸಿ
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಮಾರನಾಳ ತಾಂಡ ಕ್ರಾಸ ಬಳ್ಳಿ ಕೆಎಸ್‌ಆರ್‌ಟಿಸಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.


ಸರಿಯಾದ ಸಮಯಕ್ಕೆ ಬಸ್ ಬರದೇ ಇರುವ ಕಾರಣಕ್ಕೆ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸಮಯಕ್ಕೆ ಬರುವ ಬಸ್ಸುಗಳು ಬೇರೆ ಸಮಯಕ್ಕೆ ವರ್ಗಾಯಿಸಿರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತಿದೆ. ನಮ್ಮ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಸರಿಯಾದ ಸಮಯಕ್ಕೆ ಬಸುಗಳು ಒದಗಿಸಿ ಕೊಡಿ. ಪ್ರತಿ ವರ್ಷವೂ ಮನವಿ ಮಾಡುತ್ತಲೇ ಬರುತ್ತಿದ್ದೇವೆ.
ಅದರೆ ಯಾರು ಇದರ ವಿಚಾರವಾಗಿ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ಇದು ನಮ್ಮ ಕೊನೆಯ ಮಾನವಿ ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪಾಲಕರು ಸೇರಿ ರಸ್ತೆ ತಡೆದು ಪ್ರತಿಭಟನೆ ಮಾಡುವಂತಾಗುತ್ತದೆ ಎಂದು ಕೆಎಸ್ಆರ್ಟಿಸಿ ಸುರಪುರ್ ಘಟಕದ ಮೇಲಧಿಕಾರಿಗಳಿಗೆ ದೂರವಾಣಿ ಮುಖಾಂತರ ವಿದ್ಯಾರ್ಥಿಗಳು ಅಳಿಲನ್ನು ತೋರಿಕೊಂಡರು. ಅದನ್ನು ಆಲಿಸಿದ ಮೇಲಾಧಿಕಾರಿಯು ಖಂಡಿತ ಸರಿಯಾದ ಸಮಯಕ್ಕೆ ತಮಗೆ ಬಸ್ಸು ಒದಗಿಸುವುದಾಗಿ ಭರವಸೆಯನ್ನು ನೀಡಿದರು .
ಇದೇ ಸಂದರ್ಭದಲ್ಲಿ ಕೊಡೆಕಲ್ ಹೋಬಳಿಯ ಉಪ ತಹಶೀಲ್ದಾರ್ರಾದ ಕಲ್ಲಪ್ಪ ಜಂಜಿಗಡ್ಡಿ, ನಾರಾಯಣಪುರ ಸಂಚಾರಕ ನಿಯಂತ್ರಕರಾದ ಅಶೋಕ್ , ನಾರಾಯಣಪುರ ಪೊಲೀಸ್ ಠಾಣೆ ಎ.ಎಸ್.ಐ ಸುಭಾಷ್ ಚಂದ್ರ, ರಿಯಾಜ್ ಸಿಬ್ಬಂದಿ ಹಾಗೂ ಕೊಡೆಕಲ್ ಪೊಲೀಸ್ ಠಾಣೆ ಎ.ಎಸ್.ಐ ಸಂಗಪ್ಪ, ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು