9:32 AM Saturday19 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್

28/11/2024, 20:55

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಬಸ್ ಸರಿಯಾದ ವೇಳೆಗೆ ಬಾರದನ್ನು ವಿರೋಧಿಸಿ
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಮಾರನಾಳ ತಾಂಡ ಕ್ರಾಸ ಬಳ್ಳಿ ಕೆಎಸ್‌ಆರ್‌ಟಿಸಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.


ಸರಿಯಾದ ಸಮಯಕ್ಕೆ ಬಸ್ ಬರದೇ ಇರುವ ಕಾರಣಕ್ಕೆ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸಮಯಕ್ಕೆ ಬರುವ ಬಸ್ಸುಗಳು ಬೇರೆ ಸಮಯಕ್ಕೆ ವರ್ಗಾಯಿಸಿರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತಿದೆ. ನಮ್ಮ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಸರಿಯಾದ ಸಮಯಕ್ಕೆ ಬಸುಗಳು ಒದಗಿಸಿ ಕೊಡಿ. ಪ್ರತಿ ವರ್ಷವೂ ಮನವಿ ಮಾಡುತ್ತಲೇ ಬರುತ್ತಿದ್ದೇವೆ.
ಅದರೆ ಯಾರು ಇದರ ವಿಚಾರವಾಗಿ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ಇದು ನಮ್ಮ ಕೊನೆಯ ಮಾನವಿ ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪಾಲಕರು ಸೇರಿ ರಸ್ತೆ ತಡೆದು ಪ್ರತಿಭಟನೆ ಮಾಡುವಂತಾಗುತ್ತದೆ ಎಂದು ಕೆಎಸ್ಆರ್ಟಿಸಿ ಸುರಪುರ್ ಘಟಕದ ಮೇಲಧಿಕಾರಿಗಳಿಗೆ ದೂರವಾಣಿ ಮುಖಾಂತರ ವಿದ್ಯಾರ್ಥಿಗಳು ಅಳಿಲನ್ನು ತೋರಿಕೊಂಡರು. ಅದನ್ನು ಆಲಿಸಿದ ಮೇಲಾಧಿಕಾರಿಯು ಖಂಡಿತ ಸರಿಯಾದ ಸಮಯಕ್ಕೆ ತಮಗೆ ಬಸ್ಸು ಒದಗಿಸುವುದಾಗಿ ಭರವಸೆಯನ್ನು ನೀಡಿದರು .
ಇದೇ ಸಂದರ್ಭದಲ್ಲಿ ಕೊಡೆಕಲ್ ಹೋಬಳಿಯ ಉಪ ತಹಶೀಲ್ದಾರ್ರಾದ ಕಲ್ಲಪ್ಪ ಜಂಜಿಗಡ್ಡಿ, ನಾರಾಯಣಪುರ ಸಂಚಾರಕ ನಿಯಂತ್ರಕರಾದ ಅಶೋಕ್ , ನಾರಾಯಣಪುರ ಪೊಲೀಸ್ ಠಾಣೆ ಎ.ಎಸ್.ಐ ಸುಭಾಷ್ ಚಂದ್ರ, ರಿಯಾಜ್ ಸಿಬ್ಬಂದಿ ಹಾಗೂ ಕೊಡೆಕಲ್ ಪೊಲೀಸ್ ಠಾಣೆ ಎ.ಎಸ್.ಐ ಸಂಗಪ್ಪ, ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು