1:58 PM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್

28/11/2024, 20:55

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಬಸ್ ಸರಿಯಾದ ವೇಳೆಗೆ ಬಾರದನ್ನು ವಿರೋಧಿಸಿ
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಮಾರನಾಳ ತಾಂಡ ಕ್ರಾಸ ಬಳ್ಳಿ ಕೆಎಸ್‌ಆರ್‌ಟಿಸಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.


ಸರಿಯಾದ ಸಮಯಕ್ಕೆ ಬಸ್ ಬರದೇ ಇರುವ ಕಾರಣಕ್ಕೆ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸಮಯಕ್ಕೆ ಬರುವ ಬಸ್ಸುಗಳು ಬೇರೆ ಸಮಯಕ್ಕೆ ವರ್ಗಾಯಿಸಿರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತಿದೆ. ನಮ್ಮ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಸರಿಯಾದ ಸಮಯಕ್ಕೆ ಬಸುಗಳು ಒದಗಿಸಿ ಕೊಡಿ. ಪ್ರತಿ ವರ್ಷವೂ ಮನವಿ ಮಾಡುತ್ತಲೇ ಬರುತ್ತಿದ್ದೇವೆ.
ಅದರೆ ಯಾರು ಇದರ ವಿಚಾರವಾಗಿ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ಇದು ನಮ್ಮ ಕೊನೆಯ ಮಾನವಿ ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪಾಲಕರು ಸೇರಿ ರಸ್ತೆ ತಡೆದು ಪ್ರತಿಭಟನೆ ಮಾಡುವಂತಾಗುತ್ತದೆ ಎಂದು ಕೆಎಸ್ಆರ್ಟಿಸಿ ಸುರಪುರ್ ಘಟಕದ ಮೇಲಧಿಕಾರಿಗಳಿಗೆ ದೂರವಾಣಿ ಮುಖಾಂತರ ವಿದ್ಯಾರ್ಥಿಗಳು ಅಳಿಲನ್ನು ತೋರಿಕೊಂಡರು. ಅದನ್ನು ಆಲಿಸಿದ ಮೇಲಾಧಿಕಾರಿಯು ಖಂಡಿತ ಸರಿಯಾದ ಸಮಯಕ್ಕೆ ತಮಗೆ ಬಸ್ಸು ಒದಗಿಸುವುದಾಗಿ ಭರವಸೆಯನ್ನು ನೀಡಿದರು .
ಇದೇ ಸಂದರ್ಭದಲ್ಲಿ ಕೊಡೆಕಲ್ ಹೋಬಳಿಯ ಉಪ ತಹಶೀಲ್ದಾರ್ರಾದ ಕಲ್ಲಪ್ಪ ಜಂಜಿಗಡ್ಡಿ, ನಾರಾಯಣಪುರ ಸಂಚಾರಕ ನಿಯಂತ್ರಕರಾದ ಅಶೋಕ್ , ನಾರಾಯಣಪುರ ಪೊಲೀಸ್ ಠಾಣೆ ಎ.ಎಸ್.ಐ ಸುಭಾಷ್ ಚಂದ್ರ, ರಿಯಾಜ್ ಸಿಬ್ಬಂದಿ ಹಾಗೂ ಕೊಡೆಕಲ್ ಪೊಲೀಸ್ ಠಾಣೆ ಎ.ಎಸ್.ಐ ಸಂಗಪ್ಪ, ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು