12:51 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್

28/11/2024, 20:55

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಬಸ್ ಸರಿಯಾದ ವೇಳೆಗೆ ಬಾರದನ್ನು ವಿರೋಧಿಸಿ
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಮಾರನಾಳ ತಾಂಡ ಕ್ರಾಸ ಬಳ್ಳಿ ಕೆಎಸ್‌ಆರ್‌ಟಿಸಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.


ಸರಿಯಾದ ಸಮಯಕ್ಕೆ ಬಸ್ ಬರದೇ ಇರುವ ಕಾರಣಕ್ಕೆ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸಮಯಕ್ಕೆ ಬರುವ ಬಸ್ಸುಗಳು ಬೇರೆ ಸಮಯಕ್ಕೆ ವರ್ಗಾಯಿಸಿರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತಿದೆ. ನಮ್ಮ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಸರಿಯಾದ ಸಮಯಕ್ಕೆ ಬಸುಗಳು ಒದಗಿಸಿ ಕೊಡಿ. ಪ್ರತಿ ವರ್ಷವೂ ಮನವಿ ಮಾಡುತ್ತಲೇ ಬರುತ್ತಿದ್ದೇವೆ.
ಅದರೆ ಯಾರು ಇದರ ವಿಚಾರವಾಗಿ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ಇದು ನಮ್ಮ ಕೊನೆಯ ಮಾನವಿ ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪಾಲಕರು ಸೇರಿ ರಸ್ತೆ ತಡೆದು ಪ್ರತಿಭಟನೆ ಮಾಡುವಂತಾಗುತ್ತದೆ ಎಂದು ಕೆಎಸ್ಆರ್ಟಿಸಿ ಸುರಪುರ್ ಘಟಕದ ಮೇಲಧಿಕಾರಿಗಳಿಗೆ ದೂರವಾಣಿ ಮುಖಾಂತರ ವಿದ್ಯಾರ್ಥಿಗಳು ಅಳಿಲನ್ನು ತೋರಿಕೊಂಡರು. ಅದನ್ನು ಆಲಿಸಿದ ಮೇಲಾಧಿಕಾರಿಯು ಖಂಡಿತ ಸರಿಯಾದ ಸಮಯಕ್ಕೆ ತಮಗೆ ಬಸ್ಸು ಒದಗಿಸುವುದಾಗಿ ಭರವಸೆಯನ್ನು ನೀಡಿದರು .
ಇದೇ ಸಂದರ್ಭದಲ್ಲಿ ಕೊಡೆಕಲ್ ಹೋಬಳಿಯ ಉಪ ತಹಶೀಲ್ದಾರ್ರಾದ ಕಲ್ಲಪ್ಪ ಜಂಜಿಗಡ್ಡಿ, ನಾರಾಯಣಪುರ ಸಂಚಾರಕ ನಿಯಂತ್ರಕರಾದ ಅಶೋಕ್ , ನಾರಾಯಣಪುರ ಪೊಲೀಸ್ ಠಾಣೆ ಎ.ಎಸ್.ಐ ಸುಭಾಷ್ ಚಂದ್ರ, ರಿಯಾಜ್ ಸಿಬ್ಬಂದಿ ಹಾಗೂ ಕೊಡೆಕಲ್ ಪೊಲೀಸ್ ಠಾಣೆ ಎ.ಎಸ್.ಐ ಸಂಗಪ್ಪ, ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು