9:44 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್

28/11/2024, 20:55

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಬಸ್ ಸರಿಯಾದ ವೇಳೆಗೆ ಬಾರದನ್ನು ವಿರೋಧಿಸಿ
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಮಾರನಾಳ ತಾಂಡ ಕ್ರಾಸ ಬಳ್ಳಿ ಕೆಎಸ್‌ಆರ್‌ಟಿಸಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.


ಸರಿಯಾದ ಸಮಯಕ್ಕೆ ಬಸ್ ಬರದೇ ಇರುವ ಕಾರಣಕ್ಕೆ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸಮಯಕ್ಕೆ ಬರುವ ಬಸ್ಸುಗಳು ಬೇರೆ ಸಮಯಕ್ಕೆ ವರ್ಗಾಯಿಸಿರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತಿದೆ. ನಮ್ಮ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಸರಿಯಾದ ಸಮಯಕ್ಕೆ ಬಸುಗಳು ಒದಗಿಸಿ ಕೊಡಿ. ಪ್ರತಿ ವರ್ಷವೂ ಮನವಿ ಮಾಡುತ್ತಲೇ ಬರುತ್ತಿದ್ದೇವೆ.
ಅದರೆ ಯಾರು ಇದರ ವಿಚಾರವಾಗಿ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ಇದು ನಮ್ಮ ಕೊನೆಯ ಮಾನವಿ ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪಾಲಕರು ಸೇರಿ ರಸ್ತೆ ತಡೆದು ಪ್ರತಿಭಟನೆ ಮಾಡುವಂತಾಗುತ್ತದೆ ಎಂದು ಕೆಎಸ್ಆರ್ಟಿಸಿ ಸುರಪುರ್ ಘಟಕದ ಮೇಲಧಿಕಾರಿಗಳಿಗೆ ದೂರವಾಣಿ ಮುಖಾಂತರ ವಿದ್ಯಾರ್ಥಿಗಳು ಅಳಿಲನ್ನು ತೋರಿಕೊಂಡರು. ಅದನ್ನು ಆಲಿಸಿದ ಮೇಲಾಧಿಕಾರಿಯು ಖಂಡಿತ ಸರಿಯಾದ ಸಮಯಕ್ಕೆ ತಮಗೆ ಬಸ್ಸು ಒದಗಿಸುವುದಾಗಿ ಭರವಸೆಯನ್ನು ನೀಡಿದರು .
ಇದೇ ಸಂದರ್ಭದಲ್ಲಿ ಕೊಡೆಕಲ್ ಹೋಬಳಿಯ ಉಪ ತಹಶೀಲ್ದಾರ್ರಾದ ಕಲ್ಲಪ್ಪ ಜಂಜಿಗಡ್ಡಿ, ನಾರಾಯಣಪುರ ಸಂಚಾರಕ ನಿಯಂತ್ರಕರಾದ ಅಶೋಕ್ , ನಾರಾಯಣಪುರ ಪೊಲೀಸ್ ಠಾಣೆ ಎ.ಎಸ್.ಐ ಸುಭಾಷ್ ಚಂದ್ರ, ರಿಯಾಜ್ ಸಿಬ್ಬಂದಿ ಹಾಗೂ ಕೊಡೆಕಲ್ ಪೊಲೀಸ್ ಠಾಣೆ ಎ.ಎಸ್.ಐ ಸಂಗಪ್ಪ, ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು