8:13 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್

28/11/2024, 20:55

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಬಸ್ ಸರಿಯಾದ ವೇಳೆಗೆ ಬಾರದನ್ನು ವಿರೋಧಿಸಿ
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಮಾರನಾಳ ತಾಂಡ ಕ್ರಾಸ ಬಳ್ಳಿ ಕೆಎಸ್‌ಆರ್‌ಟಿಸಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.


ಸರಿಯಾದ ಸಮಯಕ್ಕೆ ಬಸ್ ಬರದೇ ಇರುವ ಕಾರಣಕ್ಕೆ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸಮಯಕ್ಕೆ ಬರುವ ಬಸ್ಸುಗಳು ಬೇರೆ ಸಮಯಕ್ಕೆ ವರ್ಗಾಯಿಸಿರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತಿದೆ. ನಮ್ಮ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಸರಿಯಾದ ಸಮಯಕ್ಕೆ ಬಸುಗಳು ಒದಗಿಸಿ ಕೊಡಿ. ಪ್ರತಿ ವರ್ಷವೂ ಮನವಿ ಮಾಡುತ್ತಲೇ ಬರುತ್ತಿದ್ದೇವೆ.
ಅದರೆ ಯಾರು ಇದರ ವಿಚಾರವಾಗಿ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ಇದು ನಮ್ಮ ಕೊನೆಯ ಮಾನವಿ ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪಾಲಕರು ಸೇರಿ ರಸ್ತೆ ತಡೆದು ಪ್ರತಿಭಟನೆ ಮಾಡುವಂತಾಗುತ್ತದೆ ಎಂದು ಕೆಎಸ್ಆರ್ಟಿಸಿ ಸುರಪುರ್ ಘಟಕದ ಮೇಲಧಿಕಾರಿಗಳಿಗೆ ದೂರವಾಣಿ ಮುಖಾಂತರ ವಿದ್ಯಾರ್ಥಿಗಳು ಅಳಿಲನ್ನು ತೋರಿಕೊಂಡರು. ಅದನ್ನು ಆಲಿಸಿದ ಮೇಲಾಧಿಕಾರಿಯು ಖಂಡಿತ ಸರಿಯಾದ ಸಮಯಕ್ಕೆ ತಮಗೆ ಬಸ್ಸು ಒದಗಿಸುವುದಾಗಿ ಭರವಸೆಯನ್ನು ನೀಡಿದರು .
ಇದೇ ಸಂದರ್ಭದಲ್ಲಿ ಕೊಡೆಕಲ್ ಹೋಬಳಿಯ ಉಪ ತಹಶೀಲ್ದಾರ್ರಾದ ಕಲ್ಲಪ್ಪ ಜಂಜಿಗಡ್ಡಿ, ನಾರಾಯಣಪುರ ಸಂಚಾರಕ ನಿಯಂತ್ರಕರಾದ ಅಶೋಕ್ , ನಾರಾಯಣಪುರ ಪೊಲೀಸ್ ಠಾಣೆ ಎ.ಎಸ್.ಐ ಸುಭಾಷ್ ಚಂದ್ರ, ರಿಯಾಜ್ ಸಿಬ್ಬಂದಿ ಹಾಗೂ ಕೊಡೆಕಲ್ ಪೊಲೀಸ್ ಠಾಣೆ ಎ.ಎಸ್.ಐ ಸಂಗಪ್ಪ, ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು