8:38 PM Friday17 - October 2025
ಬ್ರೇಕಿಂಗ್ ನ್ಯೂಸ್
Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ… ಮೆಡಿಕಲ್‌ ಅಗತ್ಯತೆಗೆ ಪೂರೈಕೆಗೆ ಡ್ರೋನ್‌ ಬಳಕೆಗೆ ಚಾಲನೆ: ಏರ್‌ಬೌಂಡ್‌ ಸಂಸ್ಥೆಯಿಂದ ಡ್ರೋನ್‌ ಮೂಲಕ…

ಇತ್ತೀಚಿನ ಸುದ್ದಿ

ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್

28/11/2024, 20:55

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಬಸ್ ಸರಿಯಾದ ವೇಳೆಗೆ ಬಾರದನ್ನು ವಿರೋಧಿಸಿ
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಮಾರನಾಳ ತಾಂಡ ಕ್ರಾಸ ಬಳ್ಳಿ ಕೆಎಸ್‌ಆರ್‌ಟಿಸಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.


ಸರಿಯಾದ ಸಮಯಕ್ಕೆ ಬಸ್ ಬರದೇ ಇರುವ ಕಾರಣಕ್ಕೆ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸಮಯಕ್ಕೆ ಬರುವ ಬಸ್ಸುಗಳು ಬೇರೆ ಸಮಯಕ್ಕೆ ವರ್ಗಾಯಿಸಿರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತಿದೆ. ನಮ್ಮ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಸರಿಯಾದ ಸಮಯಕ್ಕೆ ಬಸುಗಳು ಒದಗಿಸಿ ಕೊಡಿ. ಪ್ರತಿ ವರ್ಷವೂ ಮನವಿ ಮಾಡುತ್ತಲೇ ಬರುತ್ತಿದ್ದೇವೆ.
ಅದರೆ ಯಾರು ಇದರ ವಿಚಾರವಾಗಿ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ಇದು ನಮ್ಮ ಕೊನೆಯ ಮಾನವಿ ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪಾಲಕರು ಸೇರಿ ರಸ್ತೆ ತಡೆದು ಪ್ರತಿಭಟನೆ ಮಾಡುವಂತಾಗುತ್ತದೆ ಎಂದು ಕೆಎಸ್ಆರ್ಟಿಸಿ ಸುರಪುರ್ ಘಟಕದ ಮೇಲಧಿಕಾರಿಗಳಿಗೆ ದೂರವಾಣಿ ಮುಖಾಂತರ ವಿದ್ಯಾರ್ಥಿಗಳು ಅಳಿಲನ್ನು ತೋರಿಕೊಂಡರು. ಅದನ್ನು ಆಲಿಸಿದ ಮೇಲಾಧಿಕಾರಿಯು ಖಂಡಿತ ಸರಿಯಾದ ಸಮಯಕ್ಕೆ ತಮಗೆ ಬಸ್ಸು ಒದಗಿಸುವುದಾಗಿ ಭರವಸೆಯನ್ನು ನೀಡಿದರು .
ಇದೇ ಸಂದರ್ಭದಲ್ಲಿ ಕೊಡೆಕಲ್ ಹೋಬಳಿಯ ಉಪ ತಹಶೀಲ್ದಾರ್ರಾದ ಕಲ್ಲಪ್ಪ ಜಂಜಿಗಡ್ಡಿ, ನಾರಾಯಣಪುರ ಸಂಚಾರಕ ನಿಯಂತ್ರಕರಾದ ಅಶೋಕ್ , ನಾರಾಯಣಪುರ ಪೊಲೀಸ್ ಠಾಣೆ ಎ.ಎಸ್.ಐ ಸುಭಾಷ್ ಚಂದ್ರ, ರಿಯಾಜ್ ಸಿಬ್ಬಂದಿ ಹಾಗೂ ಕೊಡೆಕಲ್ ಪೊಲೀಸ್ ಠಾಣೆ ಎ.ಎಸ್.ಐ ಸಂಗಪ್ಪ, ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು