11:49 PM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್

28/11/2024, 20:55

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಬಸ್ ಸರಿಯಾದ ವೇಳೆಗೆ ಬಾರದನ್ನು ವಿರೋಧಿಸಿ
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಮಾರನಾಳ ತಾಂಡ ಕ್ರಾಸ ಬಳ್ಳಿ ಕೆಎಸ್‌ಆರ್‌ಟಿಸಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.


ಸರಿಯಾದ ಸಮಯಕ್ಕೆ ಬಸ್ ಬರದೇ ಇರುವ ಕಾರಣಕ್ಕೆ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸಮಯಕ್ಕೆ ಬರುವ ಬಸ್ಸುಗಳು ಬೇರೆ ಸಮಯಕ್ಕೆ ವರ್ಗಾಯಿಸಿರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತಿದೆ. ನಮ್ಮ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಸರಿಯಾದ ಸಮಯಕ್ಕೆ ಬಸುಗಳು ಒದಗಿಸಿ ಕೊಡಿ. ಪ್ರತಿ ವರ್ಷವೂ ಮನವಿ ಮಾಡುತ್ತಲೇ ಬರುತ್ತಿದ್ದೇವೆ.
ಅದರೆ ಯಾರು ಇದರ ವಿಚಾರವಾಗಿ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ಇದು ನಮ್ಮ ಕೊನೆಯ ಮಾನವಿ ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪಾಲಕರು ಸೇರಿ ರಸ್ತೆ ತಡೆದು ಪ್ರತಿಭಟನೆ ಮಾಡುವಂತಾಗುತ್ತದೆ ಎಂದು ಕೆಎಸ್ಆರ್ಟಿಸಿ ಸುರಪುರ್ ಘಟಕದ ಮೇಲಧಿಕಾರಿಗಳಿಗೆ ದೂರವಾಣಿ ಮುಖಾಂತರ ವಿದ್ಯಾರ್ಥಿಗಳು ಅಳಿಲನ್ನು ತೋರಿಕೊಂಡರು. ಅದನ್ನು ಆಲಿಸಿದ ಮೇಲಾಧಿಕಾರಿಯು ಖಂಡಿತ ಸರಿಯಾದ ಸಮಯಕ್ಕೆ ತಮಗೆ ಬಸ್ಸು ಒದಗಿಸುವುದಾಗಿ ಭರವಸೆಯನ್ನು ನೀಡಿದರು .
ಇದೇ ಸಂದರ್ಭದಲ್ಲಿ ಕೊಡೆಕಲ್ ಹೋಬಳಿಯ ಉಪ ತಹಶೀಲ್ದಾರ್ರಾದ ಕಲ್ಲಪ್ಪ ಜಂಜಿಗಡ್ಡಿ, ನಾರಾಯಣಪುರ ಸಂಚಾರಕ ನಿಯಂತ್ರಕರಾದ ಅಶೋಕ್ , ನಾರಾಯಣಪುರ ಪೊಲೀಸ್ ಠಾಣೆ ಎ.ಎಸ್.ಐ ಸುಭಾಷ್ ಚಂದ್ರ, ರಿಯಾಜ್ ಸಿಬ್ಬಂದಿ ಹಾಗೂ ಕೊಡೆಕಲ್ ಪೊಲೀಸ್ ಠಾಣೆ ಎ.ಎಸ್.ಐ ಸಂಗಪ್ಪ, ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು