3:27 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್

28/11/2024, 20:55

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಬಸ್ ಸರಿಯಾದ ವೇಳೆಗೆ ಬಾರದನ್ನು ವಿರೋಧಿಸಿ
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಮಾರನಾಳ ತಾಂಡ ಕ್ರಾಸ ಬಳ್ಳಿ ಕೆಎಸ್‌ಆರ್‌ಟಿಸಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.


ಸರಿಯಾದ ಸಮಯಕ್ಕೆ ಬಸ್ ಬರದೇ ಇರುವ ಕಾರಣಕ್ಕೆ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸಮಯಕ್ಕೆ ಬರುವ ಬಸ್ಸುಗಳು ಬೇರೆ ಸಮಯಕ್ಕೆ ವರ್ಗಾಯಿಸಿರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತಿದೆ. ನಮ್ಮ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಸರಿಯಾದ ಸಮಯಕ್ಕೆ ಬಸುಗಳು ಒದಗಿಸಿ ಕೊಡಿ. ಪ್ರತಿ ವರ್ಷವೂ ಮನವಿ ಮಾಡುತ್ತಲೇ ಬರುತ್ತಿದ್ದೇವೆ.
ಅದರೆ ಯಾರು ಇದರ ವಿಚಾರವಾಗಿ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ಇದು ನಮ್ಮ ಕೊನೆಯ ಮಾನವಿ ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪಾಲಕರು ಸೇರಿ ರಸ್ತೆ ತಡೆದು ಪ್ರತಿಭಟನೆ ಮಾಡುವಂತಾಗುತ್ತದೆ ಎಂದು ಕೆಎಸ್ಆರ್ಟಿಸಿ ಸುರಪುರ್ ಘಟಕದ ಮೇಲಧಿಕಾರಿಗಳಿಗೆ ದೂರವಾಣಿ ಮುಖಾಂತರ ವಿದ್ಯಾರ್ಥಿಗಳು ಅಳಿಲನ್ನು ತೋರಿಕೊಂಡರು. ಅದನ್ನು ಆಲಿಸಿದ ಮೇಲಾಧಿಕಾರಿಯು ಖಂಡಿತ ಸರಿಯಾದ ಸಮಯಕ್ಕೆ ತಮಗೆ ಬಸ್ಸು ಒದಗಿಸುವುದಾಗಿ ಭರವಸೆಯನ್ನು ನೀಡಿದರು .
ಇದೇ ಸಂದರ್ಭದಲ್ಲಿ ಕೊಡೆಕಲ್ ಹೋಬಳಿಯ ಉಪ ತಹಶೀಲ್ದಾರ್ರಾದ ಕಲ್ಲಪ್ಪ ಜಂಜಿಗಡ್ಡಿ, ನಾರಾಯಣಪುರ ಸಂಚಾರಕ ನಿಯಂತ್ರಕರಾದ ಅಶೋಕ್ , ನಾರಾಯಣಪುರ ಪೊಲೀಸ್ ಠಾಣೆ ಎ.ಎಸ್.ಐ ಸುಭಾಷ್ ಚಂದ್ರ, ರಿಯಾಜ್ ಸಿಬ್ಬಂದಿ ಹಾಗೂ ಕೊಡೆಕಲ್ ಪೊಲೀಸ್ ಠಾಣೆ ಎ.ಎಸ್.ಐ ಸಂಗಪ್ಪ, ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು