2:51 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

19/01/2026, 11:49

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಹುಣಸೂರಿನ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಚಿನ್ನಾಭರಣ ಅಂಗಡಿ ದರೋಡೆ ಪ್ರಕರಣ ಸಂಬಂಧಿಸಿದಂತೆ ಬಿಹಾರ ಮೂಲದ ಇಬ್ವರು ಅಂತರ್ ರಾಜ್ಯ ದರೋಡೆ ಕೋರರ ಬಂಧಿಸಲಾಗಿದೆ.
ಹುಣಸೂರು ಪೊಲೀಸ್ ಹಾಗೂ ಬಿಹಾರ ಎಸ್ ಟಿ ಎಫ್ ತಂಡದ ವಿಶೇಷ ಕಾರ್ಯಾಚರಣೆ ನಡೆಸಿ ಬಿಹಾರದ ದರ್ಬಾಂಗ್ ನ ಬಾಗಲ್ಪರದ ವಿವಿಧೆಡೆ ದಾಳಿ ನಡೆಸಿ ಖರಾರಿ ನಿವಾಸಿ ರಿಷಿಕೇಶ್ ಸಿಂಗ್ ಅಲಿಯಾಸ್ ಛೋಟು ಸಿಂಗ್ ಹಾಗೂ ಪಕ್ರಾ ಗ್ರಾಮದ ಪಂಕಜ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ.
ಡಿ.28ರ ಮಧ್ಯಾಹ್ನ ಪಿಸ್ತೂಲ್ ತೋರಿಸಿ. ಗಾಳಿಯಲ್ಲಿ ಗುಂಡು ಹಾರಿಸಿ. ಹುಣಸೂರು ಬೈಪಾಸ್ ರಸ್ತೆಯ ಚಿನ್ನಾಭರಣ ಅಂಗಡಿಯಲ್ಲಿ ಬರೋಬರಿ 10 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಖತರ್ನಾಕ್ ಖದೀಮರು ಇವರಾಗಿದ್ದಾರೆ.
ಬಿಹಾರ ಪೊಲೀಸರ ನೆರವಿನೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ ಕೃತ್ಯಕ್ಕೆ ಬಳಸಿದ್ದ ಬೈಕ್, ಚಿನ್ನದ ಸರ, ಒಂದು ಲಕ್ಷ ರೂ. ನಗದು, ಆಭರಣ ಪೆಟ್ಟಿಗೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪಂಕಜ್ ಕುಮಾರ್ ವಿರುದ್ದ ಕರ್ನಾಟಕ, ಬಿಹಾರ, ರಾಜಸ್ತಾನ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ಕೊಲೆಯತ್ನ, ದರೋಡೆ, ಡಕಾಯಿತಿ ಸೇರಿದಂತೆ 16 ಪ್ರಕರಣ ದಾಖಲಾಗಿದೆ. ರಿಷಿಕೇಶ್ ಸಿಂಗ್ ವಿರುದ್ದ ಬಿಹಾರ, ಕರ್ನಾಟಕದಲ್ಲಿ ನಾಲ್ಕು ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು