5:24 PM Wednesday23 - April 2025
ಬ್ರೇಕಿಂಗ್ ನ್ಯೂಸ್
Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ…

ಇತ್ತೀಚಿನ ಸುದ್ದಿ

ಹರ್ ಘರ್ ತಿರಂಗ: ರುಡ್ ಸೆಟ್ ನಲ್ಲಿ ಭರದಿಂದ ಸಾಗಿದ ರಾಷ್ಟ್ರಧ್ವಜ ಸಿದ್ದಪಡಿಸುವ ಕಾರ್ಯ

23/07/2022, 12:04

ಮಂಗಳೂರು(reporterkarnataka.com): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಗಸ್ಟ್ 11 ರಿಂದ 17 ರವರೆಗೆ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ದೇಶದ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ, ರಾಷ್ಟ್ರಪ್ರೇಮ ಅಭಿವ್ಯಕ್ತಗೊಳಿಸಲು ಅನುಕೂಲವಾಗುವಂತೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್  ರಾಷ್ಟ್ರಧ್ವಜ ಹೊಲಿದು ಸಿದ್ದಪಡಿಸಿ ನೀಡುವಂತೆ ಜಿಲ್ಲೆಯ ಸಂಜೀವಿನಿ ಗ್ರಾಮ ಪಂಚಾಯತ್ ಮತ್ತು ಅದರ ಒಕ್ಕೂಟಗಳಿಗೆ ಆದೇಶ ನೀಡಿದೆ.

ಈ ನಿಟ್ಟಿನಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಸಿದ್ಧಪಡಿಸಲು ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ರುಡ್ ಸೆಟ್ ನಲ್ಲಿ ಮಹಿಳಾ ಸ್ವ ಸಹಾಯ ಸಂಘದ 62 ಸದಸ್ಯರಿಗೆ ಧ್ವಜ ಸಂಹಿತೆಯನ್ನು ತಿಳಿಸಿಕೊಟ್ಟು, ರಾಷ್ಟ್ರಧ್ವಜವನ್ನು ಹೊಲಿಯುವ ತರಬೇತಿ ಕಾರ್ಯಕ್ರಮವನ್ನು ಜುಲೈ 22ರ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. 

ಹೊಲಿಗೆಯನ್ನು ತಿಳಿದಿರುವ 62 ಮಹಿಳೆಯರಿಗೆ ಧ್ವಜ ಸಿದ್ದಪಡಿಸಲು ಉಡುಪಿಯಿಂದ ಸಂಪನ್ಮೂಲ ವ್ಯಕ್ತಿಯೊಬ್ಬರನ್ನು ನಿಯೋಜಿಸಲಾಗಿತ್ತು. ಅವರು ಮೊದಲಿಗೆ ಧ್ವಜ ಸಂಹಿತೆಯನ್ನು ತಿಳಿಸಿ, ಧ್ವಜವನ್ನು ಸಿದ್ಧಪಡಿಸುವ ತರಬೇತಿ ನೀಡಿದರು.

ರಾಷ್ಟ್ರಧ್ವಜ ಸಿದ್ಧಪಡಿಸಲು ಅಗತ್ಯವಿರುವ ಸಾಮಗ್ರಿಗಳನ್ನು ಜಿಲ್ಲೆಯಿಂದಲೇ ಖರೀದಿಸಿ ನೀಡಲಾಗಿತ್ತು. ಧ್ವಜವನ್ನು ಹೊಲಿದ ನಂತರ ಸ್ಕ್ರಿನ್ ಪ್ರಿಂಟ್ ಮೂಲಕ ಮಧ್ಯ ಭಾಗದಲ್ಲಿ ಅಶೋಕ ಚಕ್ರವನ್ನು ಮುದ್ರಿಸಲಾಗುವುದು.

ಇಲ್ಲಿ ತರಬೇತಿ ಪಡೆದ ಮಹಿಳೆಯರು, ವಿವಿಧ ಗ್ರಾಮ ಪಂಚಾಯತ್ ಗಳು ಹಾಗೂ ಮನೆಗಳಲ್ಲಿಯೂ ಧ್ವಜಗಳನ್ನು ಹೊಲಿದು, ಸಿದ್ಧಪಡಿಸಿ ಸಂಜೀವಿನಿ ಒಕ್ಕೂಟಗಳ ಮೂಲಕ ಅವುಗಳನ್ನು ಮಾರಾಟ ಕೇಂದ್ರಕ್ಕೆ ತಲುಪಿಸಲಿದ್ದಾರೆ.

ಸುಳ್ಯ ತಾಲೂಕಿನ ಆರಂತೋಡು ಗ್ರಾಮ ಪಂಚಾಯಿತಲ್ಲೇ ಈಗಾಗಲೇ 1,500 ದ್ವಜ ಸಿದ್ಧಪಡಿಸಲು ಆದೇಶ ನೀಡಲಾಗಿದ್ದು ಅದರಲ್ಲಿ 150 ಈಗಾಗಲೇ ಸಿದ್ಧಗೊಂಡಿದೆ, ಸುಳ್ಯದ ಜಾಲಸೂರು ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ತಾಲೂಕಿನ ರಾಯಿ ಗ್ರಾಮ ಪಂಚಾಯಿತಿನಲ್ಲೂ ಕೂಡ ಧ್ವಜ ಸಿದ್ಧಪಡಿಸುವ ಕಾರ್ಯ ಬರದಿಂದ ಸಾಗಿದೆ.

2021ರಲ್ಲಿ ತರಲಾದ ತಿದ್ದುಪಡಿ ಪ್ರಕಾರ ರಾಷ್ಟ್ರ ಧ್ವಜವನ್ನು ಹತ್ತಿ, ರೇಷ್ಮೆ ಹಾಗೂ ಪಾಲಿಸ್ಟರ್ ಬಟ್ಟೆಯಲ್ಲಿ ಧ್ವಜವನ್ನು ಸಿದ್ಧಪಡಿಸಬಹುದಾಗಿದೆ.

ಧ್ವಜವನ್ನು ಸಿದ್ಧಪಡಿಸಲು ಅಗತ್ಯವಿರುವ ಕಚ್ಚಾ ವಸ್ತುವನ್ನು ಮಂಗಳೂರಿನ ಸೌರಾಷ್ಟ್ರ ಹಾಗೂ ಸ್ಕೂಲ್ ಬುಕ್ ಕಂಪೆನಿಗಳಿಂದ ಖರೀದಿಸಲಾಗುತ್ತಿದೆ ಹಾಗೂ ಬೆಂಗಳೂರಿನಲ್ಲಿಯೂ ಖರೀದಿಸಿ ತರಲಾಗುತ್ತಿದೆ, ಇದೀಗ ಸಿದ್ದ ಪಡಿಸುತ್ತಿರುವ ಹತ್ತಿ ಬಟ್ಟೆಯ ಧ್ವಜಕ್ಕೆ 60 ರೂಪಾಯಿ ಹಾಗೂ ಪಾಲಿಸ್ಟರ್ ಧ್ವಜಕ್ಕೆ 35 ರೂ.ಗಳಾಗಲಿದ್ದು,  ಅವುಗಳನ್ನು 30×20 ಹಾಗೂ 16×24 ಹಾಗೂ 6 x9 ಇಂಚುಗಳ ಅಳತೆಯಲ್ಲಿ ಹೊಲಿಯಲಾಗುತ್ತಿದೆ ಎಂದು ಎನ್ ಆರ್ ಎಲ್ ಎಂ ನ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ತಿಳಿಸುತ್ತಾರೆ.

ರುಡ್ ಸೆಟ್ ನಿರ್ದೇಶಕರಾದ ಸುರೇಶ್ ಕೆ.ಎಂ., ಎನ್.ಆರ್.ಎಲ್.ಎಂ. ವಲಯ ಮೇಲ್ವಿಚಾರಕ ಜಯಾನಂದ್ ಹಾಗೂ ಸಂಪನ್ಮೂಲ ವ್ಯಕ್ತಿ ವೀಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು