6:17 PM Friday19 - December 2025
ಬ್ರೇಕಿಂಗ್ ನ್ಯೂಸ್
Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ

ಇತ್ತೀಚಿನ ಸುದ್ದಿ

ಹುರುಳಿ ಒಕ್ಕಣೆ ಎಫೆಕ್ಟ್?: ನಡು ರಸ್ತೆಯಲ್ಲೇ ಸುಟ್ಟು ಭಸ್ಮವಾದ ಕಾರು; ಪ್ರಯಾಣಿಕರು ಪಾರು

07/01/2025, 19:34

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹುರುಳಿ ಒಕ್ಕಣೆಯ ಎಫೆಕ್ಟ್ ನಿಂದಾಗಿ ನಡುರಸ್ತೆಯಲ್ಲಿ ಕಾರು ಸುಟ್ಟು ಕರುಕಲಾಗಿ ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆಯು ನಂಜನಗೂಡು ಹಾಗೂ ಸರಗೂರು ತಾಲೂಕಿನ ಗಡಿಯಂಚಿನ ಯಶವಂತಪುರ ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.
ಸರಗೂರು ತಾಲೂಕಿನ ಪವಿತ್ರ ಧಾರ್ಮಿಕ ಕ್ಷೇತ್ರ ಶ್ರೀ ಬೇಲದಕುಪ್ಪೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳುವ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಕೆ.ಆರ್.ನಗರದ ವ್ಯಕ್ತಿಗಳಿಗೆ
ಸೇರಿದ ಕಾರು ಎಂದು ಹೇಳಲಾಗಿದೆ.
ರಸ್ತೆ ಮಧ್ಯೆ ರಾಗಿ ಹಾಗೂ ಹುರುಳಿ ಒಕ್ಕಣೆ ಮಾಡುತ್ತಿರುವ ಹಿನ್ನಲೆ ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ. ಕಾರಿಗೆ ಒಕ್ಕಣೆಗೆ ಹಾಕಿರುವ ಹುರುಳಿ ಸತ್ತೆ ಸಿಲುಕಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.ರಾತ್ರಿ ವೇಳೆ ಘಟನೆ ನಡೆದ ಕಾರಣ ಕಾರಿನಲ್ಲಿದ್ದ ಪ್ರಯಾಣಿಕರು ಅಸಹಾಯಕರಾಗಿದ್ದಾರೆ.
ಬೆಂಕಿ ಇಡೀ ಕಾರನ್ನೆ ಆವರಿಸಿ ಸುಟ್ಟು ಭಸ್ಮ ಮಾಡಿದೆ ಕಾರಿಗೆ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಮಹಿಳೆಯರು ಮಕ್ಕಳಾದಿಯಾಗಿ ಕಾರಿನಿಂದ ಇಳಿದು ಅದೃಷ್ಟ ವಸಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ನಡೆದ ನಂತರ ಒಕ್ಕಣೆ ಮಾಡಿರುವ ಕುರುಹನ್ನ ಅಳಿಸಿ ಹಾಕುವ ಯತ್ನ ನಡೆದಿದೆ ಎನ್ನಲಾಗಿದೆ. ಸದ್ಯ ರಾಜ್ಯ ಹೆದ್ದಾರಿಯಲ್ಲಿ ಕಾರು ಅನಾಥವಾಗಿ ಸುಟ್ಟು ಕರುಕಲಾದ ಸ್ಥಿತಿಯಲ್ಲಿ ನಿಂತಿರುವುದು ಮಾತ್ರ ವಿಷಾದನೀಯ.


ರಸ್ತೆಯಲ್ಲಿ ಈ ರೀತಿ ಹುರುಳಿ, ರಾಗಿ, ಭತ್ತ, ಸೇರಿದಂತೆ ವಿವಿಧ ದವಸ ಧಾನ್ಯಗಳನ್ನು ಒಕ್ಕಣೆ ಮಾಡುತ್ತಿರುವುದರಿಂದ ಇಂತಹ ದುರ್ಘಟನೆಗಳ ಜೊತೆಗೆ ಪ್ರಾಣವನ್ನು ಕಳೆದುಕೊಳ್ಳುತ್ತಿರುವ ಘಟನೆಗಳು ಆಗಿಂದ್ದಾಗ್ಗೆ ನಡೆಯುತ್ತಲೇ ಇವೆ.
ಇದರಿಂದಾಗಿ ನಾಗರೀಕರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಇದೆಲ್ಲವನ್ನೂ ಕಂಡು ಕಾಣದಂತಿರುವ ಸಂಬಂಧ ಪಟ್ಟ ಅಧಿಕಾರಿಗಳು ಮುಂದಾದರು ಇದಕ್ಕೆ ಕಡಿವಾಣ ಹಾಕಿ ಜನರ ಜೀವದ ರಕ್ಷಣೆಗೆ ಮುಂದಾಗಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು