11:54 AM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಹುರುಳಿ ಒಕ್ಕಣೆ ಎಫೆಕ್ಟ್?: ನಡು ರಸ್ತೆಯಲ್ಲೇ ಸುಟ್ಟು ಭಸ್ಮವಾದ ಕಾರು; ಪ್ರಯಾಣಿಕರು ಪಾರು

07/01/2025, 19:34

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹುರುಳಿ ಒಕ್ಕಣೆಯ ಎಫೆಕ್ಟ್ ನಿಂದಾಗಿ ನಡುರಸ್ತೆಯಲ್ಲಿ ಕಾರು ಸುಟ್ಟು ಕರುಕಲಾಗಿ ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆಯು ನಂಜನಗೂಡು ಹಾಗೂ ಸರಗೂರು ತಾಲೂಕಿನ ಗಡಿಯಂಚಿನ ಯಶವಂತಪುರ ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.
ಸರಗೂರು ತಾಲೂಕಿನ ಪವಿತ್ರ ಧಾರ್ಮಿಕ ಕ್ಷೇತ್ರ ಶ್ರೀ ಬೇಲದಕುಪ್ಪೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳುವ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಕೆ.ಆರ್.ನಗರದ ವ್ಯಕ್ತಿಗಳಿಗೆ
ಸೇರಿದ ಕಾರು ಎಂದು ಹೇಳಲಾಗಿದೆ.
ರಸ್ತೆ ಮಧ್ಯೆ ರಾಗಿ ಹಾಗೂ ಹುರುಳಿ ಒಕ್ಕಣೆ ಮಾಡುತ್ತಿರುವ ಹಿನ್ನಲೆ ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ. ಕಾರಿಗೆ ಒಕ್ಕಣೆಗೆ ಹಾಕಿರುವ ಹುರುಳಿ ಸತ್ತೆ ಸಿಲುಕಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.ರಾತ್ರಿ ವೇಳೆ ಘಟನೆ ನಡೆದ ಕಾರಣ ಕಾರಿನಲ್ಲಿದ್ದ ಪ್ರಯಾಣಿಕರು ಅಸಹಾಯಕರಾಗಿದ್ದಾರೆ.
ಬೆಂಕಿ ಇಡೀ ಕಾರನ್ನೆ ಆವರಿಸಿ ಸುಟ್ಟು ಭಸ್ಮ ಮಾಡಿದೆ ಕಾರಿಗೆ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಮಹಿಳೆಯರು ಮಕ್ಕಳಾದಿಯಾಗಿ ಕಾರಿನಿಂದ ಇಳಿದು ಅದೃಷ್ಟ ವಸಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ನಡೆದ ನಂತರ ಒಕ್ಕಣೆ ಮಾಡಿರುವ ಕುರುಹನ್ನ ಅಳಿಸಿ ಹಾಕುವ ಯತ್ನ ನಡೆದಿದೆ ಎನ್ನಲಾಗಿದೆ. ಸದ್ಯ ರಾಜ್ಯ ಹೆದ್ದಾರಿಯಲ್ಲಿ ಕಾರು ಅನಾಥವಾಗಿ ಸುಟ್ಟು ಕರುಕಲಾದ ಸ್ಥಿತಿಯಲ್ಲಿ ನಿಂತಿರುವುದು ಮಾತ್ರ ವಿಷಾದನೀಯ.


ರಸ್ತೆಯಲ್ಲಿ ಈ ರೀತಿ ಹುರುಳಿ, ರಾಗಿ, ಭತ್ತ, ಸೇರಿದಂತೆ ವಿವಿಧ ದವಸ ಧಾನ್ಯಗಳನ್ನು ಒಕ್ಕಣೆ ಮಾಡುತ್ತಿರುವುದರಿಂದ ಇಂತಹ ದುರ್ಘಟನೆಗಳ ಜೊತೆಗೆ ಪ್ರಾಣವನ್ನು ಕಳೆದುಕೊಳ್ಳುತ್ತಿರುವ ಘಟನೆಗಳು ಆಗಿಂದ್ದಾಗ್ಗೆ ನಡೆಯುತ್ತಲೇ ಇವೆ.
ಇದರಿಂದಾಗಿ ನಾಗರೀಕರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಇದೆಲ್ಲವನ್ನೂ ಕಂಡು ಕಾಣದಂತಿರುವ ಸಂಬಂಧ ಪಟ್ಟ ಅಧಿಕಾರಿಗಳು ಮುಂದಾದರು ಇದಕ್ಕೆ ಕಡಿವಾಣ ಹಾಕಿ ಜನರ ಜೀವದ ರಕ್ಷಣೆಗೆ ಮುಂದಾಗಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು