12:17 AM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಹುರುಳಿ ಒಕ್ಕಣೆ ಎಫೆಕ್ಟ್?: ನಡು ರಸ್ತೆಯಲ್ಲೇ ಸುಟ್ಟು ಭಸ್ಮವಾದ ಕಾರು; ಪ್ರಯಾಣಿಕರು ಪಾರು

07/01/2025, 19:34

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹುರುಳಿ ಒಕ್ಕಣೆಯ ಎಫೆಕ್ಟ್ ನಿಂದಾಗಿ ನಡುರಸ್ತೆಯಲ್ಲಿ ಕಾರು ಸುಟ್ಟು ಕರುಕಲಾಗಿ ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆಯು ನಂಜನಗೂಡು ಹಾಗೂ ಸರಗೂರು ತಾಲೂಕಿನ ಗಡಿಯಂಚಿನ ಯಶವಂತಪುರ ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.
ಸರಗೂರು ತಾಲೂಕಿನ ಪವಿತ್ರ ಧಾರ್ಮಿಕ ಕ್ಷೇತ್ರ ಶ್ರೀ ಬೇಲದಕುಪ್ಪೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳುವ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಕೆ.ಆರ್.ನಗರದ ವ್ಯಕ್ತಿಗಳಿಗೆ
ಸೇರಿದ ಕಾರು ಎಂದು ಹೇಳಲಾಗಿದೆ.
ರಸ್ತೆ ಮಧ್ಯೆ ರಾಗಿ ಹಾಗೂ ಹುರುಳಿ ಒಕ್ಕಣೆ ಮಾಡುತ್ತಿರುವ ಹಿನ್ನಲೆ ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ. ಕಾರಿಗೆ ಒಕ್ಕಣೆಗೆ ಹಾಕಿರುವ ಹುರುಳಿ ಸತ್ತೆ ಸಿಲುಕಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.ರಾತ್ರಿ ವೇಳೆ ಘಟನೆ ನಡೆದ ಕಾರಣ ಕಾರಿನಲ್ಲಿದ್ದ ಪ್ರಯಾಣಿಕರು ಅಸಹಾಯಕರಾಗಿದ್ದಾರೆ.
ಬೆಂಕಿ ಇಡೀ ಕಾರನ್ನೆ ಆವರಿಸಿ ಸುಟ್ಟು ಭಸ್ಮ ಮಾಡಿದೆ ಕಾರಿಗೆ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಮಹಿಳೆಯರು ಮಕ್ಕಳಾದಿಯಾಗಿ ಕಾರಿನಿಂದ ಇಳಿದು ಅದೃಷ್ಟ ವಸಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ನಡೆದ ನಂತರ ಒಕ್ಕಣೆ ಮಾಡಿರುವ ಕುರುಹನ್ನ ಅಳಿಸಿ ಹಾಕುವ ಯತ್ನ ನಡೆದಿದೆ ಎನ್ನಲಾಗಿದೆ. ಸದ್ಯ ರಾಜ್ಯ ಹೆದ್ದಾರಿಯಲ್ಲಿ ಕಾರು ಅನಾಥವಾಗಿ ಸುಟ್ಟು ಕರುಕಲಾದ ಸ್ಥಿತಿಯಲ್ಲಿ ನಿಂತಿರುವುದು ಮಾತ್ರ ವಿಷಾದನೀಯ.


ರಸ್ತೆಯಲ್ಲಿ ಈ ರೀತಿ ಹುರುಳಿ, ರಾಗಿ, ಭತ್ತ, ಸೇರಿದಂತೆ ವಿವಿಧ ದವಸ ಧಾನ್ಯಗಳನ್ನು ಒಕ್ಕಣೆ ಮಾಡುತ್ತಿರುವುದರಿಂದ ಇಂತಹ ದುರ್ಘಟನೆಗಳ ಜೊತೆಗೆ ಪ್ರಾಣವನ್ನು ಕಳೆದುಕೊಳ್ಳುತ್ತಿರುವ ಘಟನೆಗಳು ಆಗಿಂದ್ದಾಗ್ಗೆ ನಡೆಯುತ್ತಲೇ ಇವೆ.
ಇದರಿಂದಾಗಿ ನಾಗರೀಕರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಇದೆಲ್ಲವನ್ನೂ ಕಂಡು ಕಾಣದಂತಿರುವ ಸಂಬಂಧ ಪಟ್ಟ ಅಧಿಕಾರಿಗಳು ಮುಂದಾದರು ಇದಕ್ಕೆ ಕಡಿವಾಣ ಹಾಕಿ ಜನರ ಜೀವದ ರಕ್ಷಣೆಗೆ ಮುಂದಾಗಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು