9:49 PM Sunday28 - June 2026
ಬ್ರೇಕಿಂಗ್ ನ್ಯೂಸ್
ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ…

ಇತ್ತೀಚಿನ ಸುದ್ದಿ

ಶಿವಳ್ಳಿ ಸಮುದಾಯದ ಸಾತ್ವಿಕ ಅಹಾರ ಸಂಸ್ಕೃತಿ ಇಷ್ಟ: ಪತ್ರಕರ್ತ ರವೀಂದ್ರ ಜೋಶಿ

21/08/2025, 22:26

ಮಂಗಳೂರು(reporterkarnataka.com): ಶಿವಳ್ಳಿ ನಂಬಿಕಸ್ತ ಸಮುದಾಯ, ವಿಶಿಷ್ಟ ಆಹಾರ ಸಂಸ್ಕೃತಿಯ ಶಿವಳ್ಳಿ ಬ್ರಾಹ್ಮಣರ ಖಾದ್ಯಗಳು ತುಂಬಾ ರುಚಿಕರ ಎಂದು ಸಾಹಿತಿ, ಪತ್ರಕರ್ತ ರವೀಂದ್ರ ಜೋಶಿ ಹೇಳಿದರು.
ನಗರದ ಕದ್ರಿ ಶ್ರೀಮಾತಾಕೃಪಾದಲ್ಲಿ ಶಿವಳ್ಳಿ ಸ್ಪಂದನ ಕದ್ರಿ ವಲಯದ ವತಿಯಿಂದ ನಡೆದ ಆಟಿ ಕೂಟ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ಸಾತ್ವಿಕ ಆಹಾರದಿಂದ ಜನರಲ್ಲಿ ಸಾತ್ವಿಕತೆ ಹೆಚ್ಚುತ್ತದೆ. ಶಿವಳ್ಳಿ ಹೆಸರಿನ ಹೋಟೆಲ್‌ಗಳಲ್ಲಿ ಆಹಾರದಲ್ಲಿ ಮೋಸ ಇರೋದಿಲ್ಲ, ಹೊಟ್ಟೆಗೆ ಸಮಸ್ಯೆ ಆಗುವುದಿಲ್ಲ. ವಿಶಿಷ್ಟ ರುಚಿ ಇರುತ್ತವೆ. ಆದರೆ ಅಂತಹ ಹೋಟೆಲ್‌ಗಳು ಈಗ ನಶಿಸುತ್ತಿವೆ ಎಂದರು. ಸಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಮಯ ಕಳೆದರೆ ಖಿನ್ನತೆ ಉಂಟಾಗುತ್ತದೆ. ಮಾನವ ಸಂಘಜೀವಿ ಇದೇ ರೀತಿಯ ಸಮುದಾಯ ಚಟುವಟಿಕೆಗಳಲ್ಲಿ ಭಾಗಿಯಾಗುವ ಮೂಲಕ ಮಾನಸಿ, ದೈಹಿಕ ಆರೋಗ್ಯ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಕದ್ರಿ ದೇವಸ್ಥಾನ ಅರ್ಚಕರಾದ ವೇದಮೂರ್ತಿ ಕೃಷ್ಣ ಅಡಿಗರು ಪ್ರವಚನ ನೀಡಿ, ಆಟಿ ತಿಂಗಳಿನಲ್ಲಿ ಮಹಿಳೆಯರು ಹೊಸ್ತಿಲು ಬರೆಯುವ ಕ್ರಮದಿಂದ ಪ್ರಾರಂಭಿಸಿ ತುಳುನಾಡಿನಲ್ಲಿ ಆಟಿ ತಿಂಗಳನ್ನು ವಿಶೇಷ ಕ್ರಮದಿಂದ ಆಚರಿಸುತ್ತಾರೆ. ವಿವಿಧ ಆಚರಣೆಗಳಿವೆ, ಇದಕ್ಕೆ ವೈಜ್ಞಾನಿಕ/ಶಾಸ್ತ್ರದ ಹಿನ್ನೆಲೆ ಇದೆ ಎಂದರು.
ಶಿವಳ್ಳಿ ಸ್ಪಂದನ ಮಂಗಳೂರು ತಾಲೂಕಿನ ಅಧ್ಯಕ್ಷ ವಾಸುದೇವ ಭಟ್, ಕಾರ್ಯದರ್ಶಿ ಕೃಷ್ಣ ಭಟ್, ಉಪಾಧ್ಯಕ್ಷ ರಾಮಚಂದ್ರ ಭಟ್ ಎಲ್ಲೂರು, ಆಡಳಿತ ಮಂಡಳಿಯ ಸದಸ್ಯ ನೋಡು ಶ್ರೀನಿವಾಸ ಆಚಾರ್, ಮಾಧ್ಯಮ ಸಲಹೆಗಾರ ಜಿತೇಂದ್ರ ಕುಂದೇಶ್ವರ, ಧಾರ್ಮಿಕ ಪರಿಷತ್‌ ಮಾಜಿ ಸದಸ್ಯ ಗಿರಿಪ್ರಕಾಶ್‌ ತಂತ್ರಿ, ಶಿವಳ್ಳಿ ತಾಲೂಕು ಮಹಿಳಾಘಟಕದ ಅಧ್ಯಕ್ಷೆ ರಮಾಮಣಿ, ವಲಯ ಅಧ್ಯಕ್ಷೆ ಗೀತ ಬೆಳ್ಳೆ, ಕಾರ್ಯದರ್ಶಿ ಶೀಲಾ ಜಯಪ್ರಕಾಶ, ಕೋಶಾಧಿಕಾರಿ ರವಿಕಾಂತ ಭಟ್ ಇದ್ದರು.
ಅನಂತ ಭಟ್ ಮತ್ತು ರಾಮಚಂದ್ರ ಭಟ್ ಎಲ್ಲೂರು ಕಾರ್ಯಕ್ರಮ ನಿರೂಪಿಸಿದರು. ಆ ನಂತರ ಆಟಿ ತಿಂಗಳ ವಿಶೇಷ ಖಾದ್ಯ ವನ್ನು ತಯಾರಿಸಿದ ಮಹಿಳಾ ಸದಸ್ಯರನ್ನು ಸನ್ಮಾನಿಸಲಾಯಿತು. ಖಾದ್ಯಗಳನ್ನು ಎಲ್ಲಾ ಸದಸ್ಯರಿಗೆ, ಅತಿಥಿಗಳಿಗೆ ಉಣಬಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು