8:11 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

‘ಐ ಲವ್ ಕುಡ್ಲ’ ಕಲಾಕೃತಿಯ ಲೋಕಾರ್ಪಣೆ: ಜಸ್ಟಿಸ್ ಸಂತೋಷ್ ಹೆಗ್ಡೆ ಅನಾವರಣ

08/01/2023, 22:21

ಮಂಗಳೂರು(reporterkarnataka.com): ಮಂಗಳೂರು ರಾಮಕೃಷ್ಣ ಮಠದ ಪ್ರೇರಣೆಯಿಂದ ಮುನ್ನಡೆಯುತ್ತಿರುವ ಸ್ವಚ್ಛ ಮಂಗಳೂರು ಫೌಂಡೇಶನ್ ವತಿಯಿಂದ ‘ಐ ಲವ್ ಕುಡ್ಲ’ ಎಂಬ ಕಲಾಕೃತಿಯನ್ನು ನಗರದ ಹಂಪನಕಟ್ಟೆಯಲ್ಲಿ
ಅನಾವರಣಗೊಳಿಸಲಾಯಿತು.

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ಹಾಗೂ ಮಾಜಿ ಲೋಕಾಯುಕ್ತ ಜಸ್ಟಿಸ್ ಎನ್. ಸಂತೋಷ್ ಹೆಗ್ಡೆ ಅವರು ಕಲಾಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ಮಾನವನ ಅತಿ ಆಸೆಯೇ ಎಲ್ಲಾ ರೀತಿಯ ಪ್ರಕೃತಿನಾಶ ಹಾಗೂ ತ್ಯಾಜ್ಯ ಉತ್ಪತ್ತಿಗೆ ಕಾರಣವಾಗಿದೆ. ಸಂಪನ್ಮೂಲಗಳನ್ನು ಬೇಕಾದಷ್ಟೇ ಬಳಸಿದರೆ ಕಸದ ಹೊರೆ ಕಡಿಮೆಯಾಗುತ್ತದೆ. ಸ್ವಚ್ಛತೆಯನ್ನು ಸಾಧಿಸುವಲ್ಲಿಯೂ ಈ ಕಡಿಮೆ ಬಳಕೆಯ ಮಂತ್ರವನ್ನು ಪಾಲಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

ಮಹತ್ವಾಕಾಂಕ್ಷೆಯಿರುವುದು ತಪ್ಪಲ್ಲ ಆದರೆ ಹಣ, ವಸ್ತುಗಳನ್ನು ಹಾಗೂ ಸೇವೆಗಳನ್ನು ಪಡೆಯಲು ಯಾರನ್ನೂ ನೋಯಿಸದೇ ಇರುವುದೇ ನೈಜ ನಾಗರೀಕನ ಧರ್ಮ ಎಂದರು.
ಸ್ವಾರ್ಥರಹಿತ ಹಾಗೂ ಜವಾಬ್ದಾರಿಯುತ ನಾಗರಿಕರಿಂದ ಸ್ವಚ್ಛ ಸಮಾಜದ ನಿರ್ಮಾಣ ಸಾಧ್ಯ ಎಂದರು.

ಇನ್ನೋರ್ವ ಅತಿಥಿಗಳಾದ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಪಿ. ಸುಬ್ರಮಣ್ಯ ಯಡಪಡಿತ್ತಾಯ ಮಾತನಾಡಿ, ಮಂಗಳೂರಿನ ರಾಮಕೃಷ್ಣ ಆಶ್ರಮದ ಸ್ವಚ್ಛತಾ ಅಭಿಯಾನದ ಯಶಸ್ಸನ್ನು ಶ್ಲಾಘಿಸಿದರು. ಹಲವಾರು ಕಾರ್ಯಕರ್ತರ ಸ್ವಾರ್ಥ ರಹಿತ ಸೇವೆಯಿಂದ ಇಂಥಹಾ ಸಾಧನೆ ಸಾಧ್ಯವಾಗಿದೆ. ಎಲ್ಲಿ ಬದ್ದತೆ ಮತ್ತು ಸೇವೆ ಇರುತ್ತದೆಯೋ ಅಲ್ಲಿ ಮಹತ್ಕಾರ್ಯಗಳು ಆಗುತ್ತವೆ ಎಂದರು.

ರಾಮಕೃಷ್ಣ ಮಠದ ಸ್ವಾಮಿ ರಘು ರಾಮಾನಂದಜಿ, ಸಭಾ ಕಾರ್ಯಕ್ರಮ ಉದ್ಘಾಟಿಸಿ, ಆಶೀರ್ವಚನ ನೀಡಿದರು.
ಹಲವರ ಪ್ರಯತ್ನದ ಪರಿಣಾಮವಾಗಿರುವ ಸ್ವಚ್ಛ ಮಂಗಳೂರು ಅಭಿಯಾನ ಮುಂಬರುವ ದಿನಗಳಲ್ಲಿ ಇನ್ನಷ್ಟು ಉತ್ತಮ ರೀತಿಯಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು.

ಕರ್ನಾಟಕ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗು ಸ್ವಚ್ಚ ಮಂಗಳೂರು ಫೌಂಡೇಶನ್ ನ ಮಾರ್ಗದರ್ಶಕರಾದ ಕ್ಯಾ. ಗಣೇಶ್ ಕಾರ್ಣಿಕ್ ಆಶಯ ಭಾಷಣ ಮಾಡಿ ಸ್ವಾಗತಿಸಿದರು.

ಸ್ವಚ್ಛ ಮಂಗಳೂರು ಫೌಂಡೇಶನ್ ನ ಅಧ್ಯಕ್ಷ ಉಮನಾಥ ಕೋಟೇಕಾರ್ ವೇದಿಕೆಯಲ್ಲಿ ಉಸ್ಥಿತರಿದ್ದರು. ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರ ಡಿ. ವೇದವ್ಯಾಸ ಕಾಮತ್ ಸಭೆಯಲ್ಲಿ ಉಪಸ್ಥಿತರಿದ್ದರು.

ಕಲಾಕೃತಿ ತಯಾರಿಸಿದ ವಿಕ್ರಂ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ರಂಜನ್ ಬೆಳ್ಳರ್ಪಾಡಿ ವಂದಿಸಿದರು. ಅಭಿಷೇಕ್ ಶೆಟ್ಟಿ ನಿರೂಪಿಸಿದರು.
ಮಂಗಳೂರು ಮಹಾನಗರದ ಜಾಗೃತ ನಾಗರಿಕರು ಮತ್ತು ಸ್ವಚ್ಚ ಮಂಗಳೂರಿನ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು