2:09 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಇಎಸ್ಐ ಆಸ್ಪತ್ರೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದಿಢೀರ್ ಭೇಟಿ: ಸರ್ವರ್ ಸಮಸ್ಯೆ; ರೋಗಿಗಳ ಪರದಾಟ

01/01/2025, 21:18

ಮಂಗಳೂರು(reporterkarnataka.com): ನಗರದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ (ಇಎಸ್ಐ)ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರೋಗಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಈ ವೇಳೆ ಆಸ್ಪತ್ರೆಯ ಹಿರಿಯ ಅಧಿಕಾರಿಗಳ ಅನುಪಸ್ಥಿತಿ ಕಂಡು ಬಂದಿದ್ದು, ತಕ್ಷಣವೇ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ರೋಗಿಗಳ ಸಮಸ್ಯೆಗೆ ಕಾರಣವಾದ ಸರ್ವರ್ ದೋಷವನ್ನು ಸರಿಪಡಿಸಲು ಅಧಿಕಾರಿಗಳು ನೀಡಲಾಗಿರುವ ದೂರುಗಳ ಪತ್ರಗಳನ್ನು ಹಾಜರುಪಡಿಸುವಂತೆ ತಿಳಿಸಿದರು. ಇದೇ ವೇಳೆ ಕಳೆದ ಹಲವಾರು ದಿನಗಳಿಂದ ಇಲ್ಲಿಗೆ ಬರುವ ರೋಗಿಗಳಿಗೆ ಸರ್ವರ್ ದೋಷವಿದೆ ಎಂದು ಹೇಳಿ, ದೂರದ ಊರುಗಳಿಂದ ಬರುವ ರೋಗಿಗಳು ಸತಾಯಿಸುವ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದ ಸಂಸದರು ಸರ್ವರ್ ಸಮಸ್ಯೆ ಇದ್ದರೆ ಇತರ ಆಸ್ಪತ್ರೆಗಳಿಗೆ ನೀಡುವ ಪತ್ರಗಳನ್ನು ಅಂತರ್ಜಾಲದಲ್ಲಿ ಆಗದಿದ್ದರೆ ಕೈ ಬರಹ ಮೂಲಕ ನೀಡಿ ಕೊಡಬೇಕು. ಯಾವುದೇ ಕಾರಣಕ್ಕೂ ರೋಗಿಗಳಿಗೆ ತೊಂದರೆ ನೀಡಬಾರದು ಎಂದು ತಾಕೀತು ಮಾಡಿದರು. ಈ ವೇಳೆ ಸಂದರ್ಭದಲ್ಲಿ ಮಾತನಾಡಿದ ಓರ್ವ ರೋಗಿಯ ಸಂಬಂಧಿಕರು ಕಳೆದ ಹಲವಾರು ವರ್ಷಗಳಿಂದ ಡಯಬಿಟಿಸ್ ರೋಗಿಗಳಿಗೆ
ಡಯಾಲಿಸಿಸ್ ಮಾಡಲು ಒಂದು ತಿಂಗಳಿಗೆ 12 ಟೋಕನ್ ನೀಡಲಾಗುತ್ತಿತ್ತು. ಆದರೆ ಈಗ 3 ತಿಂಗಳಿಗೆ ಟೋಕನ್ ನೀಡಲಾಗುತ್ತಿದ್ದು ಅದು ಸಹ ಈಗ ಸರ್ವರ್ ಸಮಸ್ಯೆಯಿಂದ ಸರಿಯಾದ ಸಮಯಕ್ಕೆ ಸಿಗದೇ ಖಾಸಗಿ ಆಸ್ಪತ್ರೆಯಲ್ಲಿ ನಗದು ಹಣ ನೀಡಿ ಡಯಾಲಿಸಿಸಿ ಮಾಡಿಕೊಳ್ಳುವಂತಾಗಿದೆ.
ಅಲ್ಲದೆ ದೂರದ ಊರಿನಿಂದ ಬೆಳಗ್ಗೆ 8 ಗಂಟೆಗೆ ಬಂದ ನಮಗೆ ಈಗ ಸಂಜೆ 5ರ ತನಕವೂ ಸರ್ವರ್ ಸಮಸ್ಯೆ, ಸರಿ ಆಗಿಲ್ಲ ಎಂದರು ನಮಗೆ ಇಷ್ಟು ದೂರ ನಡೆಯಲು ಸಹ ಸಾಧ್ಯವಿಲ್ಲ. ಅಲ್ಲದೆ ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದರೆ ಮಾತ್ರ ಟೋಕನ್ ನೀಡಲಾಗುವುದು ಎನ್ನುವ ನಿಯಮ ಬೇರೆ ಜಾರಿ ಮಾಡಿದ್ದಾರೆ ಎಂದರು.
ಇದೇ ವೇಳೆ ಭೇಟಿ ನೀಡಿದ್ದ ಸಂಸದರು ಇಂದು ಇಎಸ್ಐ ಆಸ್ಪತ್ರೆಗೆ ಭೇಟಿ ನೀಡಿದ್ದ ರೋಗಿಗಳ ಸಮಸ್ಯೆಯನ್ನು ತಿಳಿದುಕೊಂಡು ಅವರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಅಧಿಕಾರಿಗಳಿಗೆ ಆದೇಶಿಸಿದರು. ಇಂದು ರೋಗಿಗಳಿಗೆ ಅವಶ್ಯ ವಾಗಿರುವ ಸೂಕ್ತ ದಾಖಲೆ ಗಳನ್ನು ಸ್ಥಳದಲ್ಲೇ ದೊರಕಿಸಿ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಸಮಸ್ಯೆ ಸರಿ ಪಡಿಸುವ ಭರವಸೆಯನ್ನು ನೀಡಿದ್ದಾರೆ ಎಂದು ಸ್ಥಳದಲ್ಲಿದ್ದ ರೋಗಿಗಳು ಸಂತಸ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು