9:58 PM Saturday3 - May 2025
ಬ್ರೇಕಿಂಗ್ ನ್ಯೂಸ್
ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ… Vijayapura | ಸಚಿವ ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ:… ತನಿಖೆಯ ಮುನ್ನವೇ ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್; ಸ್ಪೀಕರ್ ಖಾದರ್ ತಕ್ಷಣ ರಾಜೀನಾಮೆ… Chikkamagaluru | ಪೆಹಲ್ಗಾಮ್ ದಾಳಿ: ಆಲ್ದೂರು ಪಟ್ಟಣ ಬಂದ್; ವ್ಯಾಪಾರ-ವಹಿವಾಟು ಸ್ತಬ್ದ; ವಾರದ… Kerala | ಪ್ರಧಾನಿ ಮೋದಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದೇ… Karnataka High Court | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗೆ ಅಶ್ಲೀಲ ಪದ… ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ Chikkamagaluru | ಜಯಪುರ ಅತ್ತಿಕುಡಿಗೆ ರಸ್ತೆ ಬದಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ Mangaluru | ಹುಟ್ಟೂರು ಬಂಟ್ವಾಳದತ್ತ ಸುಹಾಸ್ ಶೆಟ್ಟಿ ಪಾರ್ಥಿವ ಶರೀರ ಮೆರವಣಿಗೆ: ಬಿಗಿ… ಸುಹಾಸ್ ಶೆಟ್ಟಿ ಕೊಲೆ: ದ.ಕ. ಬಂದ್ ಗೆ ವಿಎಚ್ ಪಿ, ಭಜರಂಗದಳ ಕರೆ

ಇತ್ತೀಚಿನ ಸುದ್ದಿ

ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ

02/05/2025, 20:39

ಮಂಡ್ಯ(reporterkarnataka.com): ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು.


ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವ್ಥಾನ ಪುನರ್ ನಿರ್ಮಾಣ, ವಿಗ್ರಹಗಳ ಸ್ಥಾಪನೆ ಹಾಗೂ ಗೋಪುರ ಕುಂಭಾಭಿಷೇಕ ನೆರವೇರಿಸಿ ಮಾತನಾಡುವ ವೇಳೆ ತಾವು ಬಾಲ್ಯದಲ್ಲಿ ಹಾಡುತ್ತಿದ್ದ, ವೀರ ಕುಣಿತದಲ್ಲಿ ನರ್ತಿಸುತ್ತಿದ್ದದ್ದನ್ನು ಉಲ್ಲೇಖಿಸಿ ಲಾವಣಿ ಹಾಡಿದರು.
ಸಿದ್ದರಾಮೇಶ್ವರ ಪೂಜೆಗೆ ವೀರಕುಣಿತದ ಜನಪದ ನೃತ್ಯ ಈಗಲೂ ಚಾಲ್ತಿಯಲ್ಲಿದೆ. ನಾನೂ ವೀರಕುಣಿತ ಸೇರಿದ್ದೆ. ಆಮೇಲೆ ರಾಜಪ್ಪ ಮೇಸ್ಟ್ರು ನನ್ನನ್ನು ಕರೆದುಕೊಂಡು ಹೋಗಿ ಐದನೇ ತರಗತಿಗೆ ಸೇರಿದರು. ಹೀಗೆ ನನ್ನ ಶಿಕ್ಷಣ ಆರಂಭವಾಯಿತು. ಅಲ್ಲಿಂದ ನಾನು ಎಲ್ಲೂ ಫೇಲಾಗಲೇ ಇಲ್ಲ ಎಂದರು.
ಜನರ ಸೇವೆಯೇ ದೇವರ ಸೇವೆ ಎಂದು ನಂಬಿದವನು ನಾನು. ಬಸವಣ್ಣನವರು ಇದನ್ನೇ “ದೇಹವೇ ದೇಗುಲ” ಎಂದು ಹಾಡಿದರು. ದೇವರು ಮತ್ತು ಜನರ ನಡುವೆ ಮಧ್ಯವರ್ತಿ ಇರಬಾರದು ಎನ್ನುವುದು ಬಸವಣ್ಣನವರ ಮೌಲ್ಯವಾಗಿತ್ತು ಎಂದು ಅವರು ನುಡಿದರು.
ನಾವು ಮಾನವೀಯವಾಗಿ ಇದ್ದರಷ್ಟೆ ದೇವರ ಸಹಾಯ ಸಿಗುತ್ತದೆ. ಅಮಾನವೀಯತೆಯಿಂದ ನಡೆಸುವವರಿಗೆ ಯಾವ ದೇವರೂ ಸಹಾಯ ಮಾಡುವುದಿಲ್ಲ ಎಂದರು.
ಅಂಬೇಡ್ಕರ್ ಅವರ ಸಂವಿಧಾನ, ಬಸವಾದಿ ಶರಣರ ಆಶಯದಂತೆ ಜಾತಿ ನಿರ್ಮೂಲನೆ ಮಾಡಬೇಕಿದೆ. ಜಾತಿಗೆ ಚಲನೆ ಇಲ್ಲ, ವರ್ಗಕ್ಕೆ ಚಲನೆ ಇದೆ. ನಿಂತ ನೀರಾಗಿರುವ ಜಾತಿಯನ್ನು ಅಳಿಸಬೇಕಾದರೆ ಶಿಕ್ಷಣ ಮತ್ತು ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯ ಮತ್ತು ಅವಕಾಶಗಳನ್ನು ಒದಗಿಸಬೇಕು. ಆಗ ಮಾತ್ರ ಜಾತಿ ಅಳಿಸುವ ದಿಕ್ಕಿನಲ್ಲಿ ಸಾಗಬಹುದು ಎಂದು ಅವರು ಹೇಳಿದರು.
ಮೊದಲೆಲ್ಲಾ ವ್ಯಕ್ತಿಗಳ ಅರ್ಹತೆಯನ್ನು ಜಾತಿ ಆಧಾರದಲ್ಲಿ ಅಳೆಯುತ್ತಿದ್ದರು. ಇದು ಹೋಗಿ ನಿಜವಾದ ಅರ್ಹತೆ ಆಧಾರದಲ್ಲಿ ಅಳೆಯಬೇಕು ಎಂದರು.
ನಾನು ಉಪಮುಖ್ಯಮಂತ್ರಿಯಾಗಿ ಮೊದಲ ಬಜೆಟ್ ಮಂಡಿಸುವಾಗ “ನೂರು ಕುರಿ ಎಣಿಸಲು ಬರದವನು ಬಜೆಟ್ ಮಂಡಿಸ್ತಾನಾ” ಎಂದು ಅಣಕಿಸಿದ್ದರು. ಈಗ ನಾನು 16 ಬಜೆಟ್ ಮಂಡಿಸಿದ್ದೇನೆ. ಆದ್ದರಿಂದ ಅವಕಾಶ ಮುಖ್ಯ. ಅವಕಾಶ ಸಿಕ್ಕಾಗ ಎಲ್ಲರ ಪ್ರತಿಭೆ ಹೊರಗೆ ಬರುತ್ತದೆ ಎಂದು ಅವರು ನುಡಿದರು.
ಆಚಾರವೇ ಸ್ವರ್ಗ, ಅನಾಚಾರವೇ ನರಕ ಎನ್ನುವ ಬಸವಣ್ಣನವರ ಸರಳ ಧರ್ಮದ ಸಾರವನ್ನು ಪಾಲಿಸಬೇಕು. ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿ ಎಂದರು.
ಮಾಡಬಾರದ ಪಾಪದ ಕೆಲಸಗಳನ್ನು ಮಾಡಿ ಒಳ್ಳೇದು ಮಾಡಪ್ಪಾ ಅಂದ್ರೆ ದೇವರು ಒಳ್ಳೇದು ಮಾಡಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು