5:41 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಸಂತ್ರಸ್ತೆಯ ಪರ ತಾಯಿಯಂತೆ ನಿಲ್ಲುತ್ತೇನೆ: ಪುತ್ತೂರಿನಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭರವಸೆ

07/03/2026, 13:02

ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಪುತ್ತೂರಿನ ತಾರಿಗುಡ್ಡೆಗೆ ಭೇಟಿ ನೀಡಿ, ಮದುವೆಯಾಗುವುದಾಗಿ ನಂಬಿಸಿ ವಂಚನೆಗೊಳಗಾದ ಸಂತ್ರಸ್ತ ಯುವತಿಗೆ ಸಾಂತ್ವನ ಹೇಳಿದರು.
ಸಂತ್ರಸ್ತೆಯ ಮನೆಗೆ ತೆರಳಿದ ಡಾ. ಚೌಧರಿ, ನೊಂದ ಕುಟುಂಬದ ಅಹವಾಲನ್ನು ಆಲಿಸಿ ಅವರಿಗೆ ಧೈರ್ಯ ತುಂಬಿದರು. ಮಹಿಳಾ ಆಯೋಗವು ಯಾವಾಗಲೂ ನೊಂದ ಮಹಿಳೆಯರ ಪರವಾಗಿ ತಾಯಿಯ ಸ್ಥಾನದಲ್ಲಿ ನಿಂತು ರಕ್ಷಣೆ ನೀಡುತ್ತದೆ ಎಂದು ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.
ಸಂತ್ರಸ್ತೆಯ ಭವಿಷ್ಯದ ಬಗ್ಗೆ ಕಾಳಜಿ ವ್ಯಕ್ತಪಡಿಸಿದ ಡಾ. ನಾಗಲಕ್ಷ್ಮಿ ಚೌಧರಿ, ಆಕೆಯನ್ನು ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಸದೃಢಗೊಳಿಸಲು ಆಯೋಗದ ವತಿಯಿಂದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಯುವತಿಯ ಮುಂದಿನ ಶಿಕ್ಷಣಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಡುವುದಾಗಿ ಭರವಸೆ ನೀಡಿದ ಅವರು, ಸದ್ಯ ಪ್ರಕರಣವು ನ್ಯಾಯಾಲಯದ ವ್ಯಾಪ್ತಿಯಲ್ಲಿರುವುದರಿಂದ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಮಹಿಳಾ ಆಯೋಗವು ಸಂತ್ರಸ್ತೆಗೆ ನ್ಯಾಯ ಕೊಡಿಸುವಲ್ಲಿ ಪೂರ್ಣ ಪ್ರಮಾಣದಲ್ಲಿ ಬೆಂಬಲ ನೀಡಲಿದೆ ಎಂದು ಅವರು ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು