3:25 AM Monday25 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಇಬ್ಬರು ಅಂತರ್ ಜಿಲ್ಲಾ ಚೋರರ ಬಂಧನ: 8 ಲಕ್ಷ ರೂ. ಮೌಲ್ಯದ ವಾಹನಗಳ ವಶ

20/01/2022, 10:27

ಮೈಸೂರು(reporterkarnataka.com): ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಪೊಲೀಸರು ಅವರಿಂದ 8 ಲಕ್ಷ ರೂ.ಮೌಲ್ಯದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಪಟ್ಟಣದ ನಿವಾಸಿಗಳಾದ ಅರುಣ(29) ಮತ್ತು ಗುರುಪ್ರಸಾದ್ ಬಂಧಿತ ಆರೋಪಿಗಳು.ವೃತ್ತಿಯಲ್ಲಿ ಆಟೋ ಚಾಲಕರಾದ ಇಬ್ಬರು ಬೇರೆ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದರು.

ಆರೋಪಿಗಳು ಮೈಸೂರು ನಗರ, ಮದ್ದೂರು, ಕೊಳ್ಳೇಗಾಲದಲ್ಲಿ ವಾಹನಗಳನ್ನು ಕಳವು ಮಾಡುತ್ತಿದ್ದರು. ಇವರಿಂದ ಕಳವು ಮಾಲು ಖರೀದಿಸಿದ್ದ ಪಟ್ಟಣದ ನಿವಾಸಿಗಳಾದ ನಹೀಮ್ತಾಜ್ ಅಜರ್ ಪಾಷ ಮತ್ತು ಮನು ಅಲಿಯಾಸ್ ಕಳ್ಳಮನು ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಪಟ್ಟಣದ ಪೋಲೀಸ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮಾತನಾಡಿ, ಆರೋಪಿಗಳಾದ ಅರುಣ ಮತ್ತು ಗುರುಪ್ರಸಾದ್ ಮೈಸೂರು ನಗರ ಸೇರಿದಂತೆ ವಿವಿಧೆಡೆ ವಾಹನಗಳನ್ನು ಕಳ್ಳತನ ಮಾಡುತ್ತಿದ್ದರು. ಬಂಧಿತರಿಂದ ಮೈಸೂರು ನಗರದಿಂದ ಕಳವು ಮಾಡಿದ್ದ 8 ಪ್ಯಾಸೆಂಜರ್ ಆಟೋ ರಿಕ್ಷಾ, ಒಂದು ಆಪೇ ಗೂಡ್ಸ್ ಆಟೋ, 4 ದ್ವಿಚಕ್ರ ವಾಹನಗಳು, ಮದ್ದೂರು ಪಟ್ಟಣದ ಒಂದು ದ್ವಿಚಕ್ರ ವಾಹನ, ಕೊಳ್ಳೇಗಾಲ ಪಟ್ಟಣದ ಒಂದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು