7:50 AM Monday13 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಇಬ್ಬರು ಅಂತರ್ ಜಿಲ್ಲಾ ಚೋರರ ಬಂಧನ: 8 ಲಕ್ಷ ರೂ. ಮೌಲ್ಯದ ವಾಹನಗಳ ವಶ

20/01/2022, 10:27

ಮೈಸೂರು(reporterkarnataka.com): ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಪೊಲೀಸರು ಅವರಿಂದ 8 ಲಕ್ಷ ರೂ.ಮೌಲ್ಯದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಪಟ್ಟಣದ ನಿವಾಸಿಗಳಾದ ಅರುಣ(29) ಮತ್ತು ಗುರುಪ್ರಸಾದ್ ಬಂಧಿತ ಆರೋಪಿಗಳು.ವೃತ್ತಿಯಲ್ಲಿ ಆಟೋ ಚಾಲಕರಾದ ಇಬ್ಬರು ಬೇರೆ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದರು.

ಆರೋಪಿಗಳು ಮೈಸೂರು ನಗರ, ಮದ್ದೂರು, ಕೊಳ್ಳೇಗಾಲದಲ್ಲಿ ವಾಹನಗಳನ್ನು ಕಳವು ಮಾಡುತ್ತಿದ್ದರು. ಇವರಿಂದ ಕಳವು ಮಾಲು ಖರೀದಿಸಿದ್ದ ಪಟ್ಟಣದ ನಿವಾಸಿಗಳಾದ ನಹೀಮ್ತಾಜ್ ಅಜರ್ ಪಾಷ ಮತ್ತು ಮನು ಅಲಿಯಾಸ್ ಕಳ್ಳಮನು ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಪಟ್ಟಣದ ಪೋಲೀಸ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮಾತನಾಡಿ, ಆರೋಪಿಗಳಾದ ಅರುಣ ಮತ್ತು ಗುರುಪ್ರಸಾದ್ ಮೈಸೂರು ನಗರ ಸೇರಿದಂತೆ ವಿವಿಧೆಡೆ ವಾಹನಗಳನ್ನು ಕಳ್ಳತನ ಮಾಡುತ್ತಿದ್ದರು. ಬಂಧಿತರಿಂದ ಮೈಸೂರು ನಗರದಿಂದ ಕಳವು ಮಾಡಿದ್ದ 8 ಪ್ಯಾಸೆಂಜರ್ ಆಟೋ ರಿಕ್ಷಾ, ಒಂದು ಆಪೇ ಗೂಡ್ಸ್ ಆಟೋ, 4 ದ್ವಿಚಕ್ರ ವಾಹನಗಳು, ಮದ್ದೂರು ಪಟ್ಟಣದ ಒಂದು ದ್ವಿಚಕ್ರ ವಾಹನ, ಕೊಳ್ಳೇಗಾಲ ಪಟ್ಟಣದ ಒಂದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು