2:56 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಇಬ್ಬರು ಅಂತರ್ ಜಿಲ್ಲಾ ಚೋರರ ಬಂಧನ: 8 ಲಕ್ಷ ರೂ. ಮೌಲ್ಯದ ವಾಹನಗಳ ವಶ

20/01/2022, 10:27

ಮೈಸೂರು(reporterkarnataka.com): ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಪೊಲೀಸರು ಅವರಿಂದ 8 ಲಕ್ಷ ರೂ.ಮೌಲ್ಯದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಪಟ್ಟಣದ ನಿವಾಸಿಗಳಾದ ಅರುಣ(29) ಮತ್ತು ಗುರುಪ್ರಸಾದ್ ಬಂಧಿತ ಆರೋಪಿಗಳು.ವೃತ್ತಿಯಲ್ಲಿ ಆಟೋ ಚಾಲಕರಾದ ಇಬ್ಬರು ಬೇರೆ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದರು.

ಆರೋಪಿಗಳು ಮೈಸೂರು ನಗರ, ಮದ್ದೂರು, ಕೊಳ್ಳೇಗಾಲದಲ್ಲಿ ವಾಹನಗಳನ್ನು ಕಳವು ಮಾಡುತ್ತಿದ್ದರು. ಇವರಿಂದ ಕಳವು ಮಾಲು ಖರೀದಿಸಿದ್ದ ಪಟ್ಟಣದ ನಿವಾಸಿಗಳಾದ ನಹೀಮ್ತಾಜ್ ಅಜರ್ ಪಾಷ ಮತ್ತು ಮನು ಅಲಿಯಾಸ್ ಕಳ್ಳಮನು ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಪಟ್ಟಣದ ಪೋಲೀಸ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮಾತನಾಡಿ, ಆರೋಪಿಗಳಾದ ಅರುಣ ಮತ್ತು ಗುರುಪ್ರಸಾದ್ ಮೈಸೂರು ನಗರ ಸೇರಿದಂತೆ ವಿವಿಧೆಡೆ ವಾಹನಗಳನ್ನು ಕಳ್ಳತನ ಮಾಡುತ್ತಿದ್ದರು. ಬಂಧಿತರಿಂದ ಮೈಸೂರು ನಗರದಿಂದ ಕಳವು ಮಾಡಿದ್ದ 8 ಪ್ಯಾಸೆಂಜರ್ ಆಟೋ ರಿಕ್ಷಾ, ಒಂದು ಆಪೇ ಗೂಡ್ಸ್ ಆಟೋ, 4 ದ್ವಿಚಕ್ರ ವಾಹನಗಳು, ಮದ್ದೂರು ಪಟ್ಟಣದ ಒಂದು ದ್ವಿಚಕ್ರ ವಾಹನ, ಕೊಳ್ಳೇಗಾಲ ಪಟ್ಟಣದ ಒಂದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು