6:48 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಇಬ್ಬರು ಅಂತರ್ ಜಿಲ್ಲಾ ಚೋರರ ಬಂಧನ: 8 ಲಕ್ಷ ರೂ. ಮೌಲ್ಯದ ವಾಹನಗಳ ವಶ

20/01/2022, 10:27

ಮೈಸೂರು(reporterkarnataka.com): ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಪೊಲೀಸರು ಅವರಿಂದ 8 ಲಕ್ಷ ರೂ.ಮೌಲ್ಯದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಪಟ್ಟಣದ ನಿವಾಸಿಗಳಾದ ಅರುಣ(29) ಮತ್ತು ಗುರುಪ್ರಸಾದ್ ಬಂಧಿತ ಆರೋಪಿಗಳು.ವೃತ್ತಿಯಲ್ಲಿ ಆಟೋ ಚಾಲಕರಾದ ಇಬ್ಬರು ಬೇರೆ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದರು.

ಆರೋಪಿಗಳು ಮೈಸೂರು ನಗರ, ಮದ್ದೂರು, ಕೊಳ್ಳೇಗಾಲದಲ್ಲಿ ವಾಹನಗಳನ್ನು ಕಳವು ಮಾಡುತ್ತಿದ್ದರು. ಇವರಿಂದ ಕಳವು ಮಾಲು ಖರೀದಿಸಿದ್ದ ಪಟ್ಟಣದ ನಿವಾಸಿಗಳಾದ ನಹೀಮ್ತಾಜ್ ಅಜರ್ ಪಾಷ ಮತ್ತು ಮನು ಅಲಿಯಾಸ್ ಕಳ್ಳಮನು ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಪಟ್ಟಣದ ಪೋಲೀಸ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮಾತನಾಡಿ, ಆರೋಪಿಗಳಾದ ಅರುಣ ಮತ್ತು ಗುರುಪ್ರಸಾದ್ ಮೈಸೂರು ನಗರ ಸೇರಿದಂತೆ ವಿವಿಧೆಡೆ ವಾಹನಗಳನ್ನು ಕಳ್ಳತನ ಮಾಡುತ್ತಿದ್ದರು. ಬಂಧಿತರಿಂದ ಮೈಸೂರು ನಗರದಿಂದ ಕಳವು ಮಾಡಿದ್ದ 8 ಪ್ಯಾಸೆಂಜರ್ ಆಟೋ ರಿಕ್ಷಾ, ಒಂದು ಆಪೇ ಗೂಡ್ಸ್ ಆಟೋ, 4 ದ್ವಿಚಕ್ರ ವಾಹನಗಳು, ಮದ್ದೂರು ಪಟ್ಟಣದ ಒಂದು ದ್ವಿಚಕ್ರ ವಾಹನ, ಕೊಳ್ಳೇಗಾಲ ಪಟ್ಟಣದ ಒಂದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು