8:02 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಇಬ್ಬರು ಹಿರಿಯ ಕಾಯಕ ಯೋಗಿಗಳಿಗೆ ಕದಿಕೆ ಟ್ರಸ್ಟ್ ನ ಅತ್ಯುನ್ನತ ‘ನೇಕಾರ ರತ್ನ’ ಪ್ರಶಸ್ತಿ

06/08/2024, 20:39

ಮಂಗಳೂರು(reporterkarnataka.com): ಕದಿಕೆ ಟ್ರಸ್ಟ್ , ಕೈಮಗ್ಗ ನೇಕಾರರಿಗೆ ಕೊಡ ಮಾಡುವ,ಪ್ರತಿಷ್ಟಿತ “ನೇಕಾರ ರತ್ನ ” ಪ್ರಶಸ್ತಿಗೆ ಸಂಜೀವ ಶೆಟ್ಟಿಗಾರ್ ಹಾಗೂ ಸೋಮಪ್ಪ ಜತ್ತನ್ನ ಆಯ್ಕೆಯಾಗಿದ್ದಾರೆ.
86 ವರ್ಷದ ಸಂಜೀವ ಶೆಟ್ಟಿಗಾರ್( ಅಧ್ಯಕ್ಷರು, ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ) ಮತ್ತು 87ರ ಹರೆಯದ ಸೋಮಪ್ಪ ಜತ್ತನ್ನ (ನಿರ್ದೇಶಕರು , ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘ) ಅವರು ತಮ್ಮ ಜೀವಮಾನದ ಸಾಧನೆಗಾಗಿ ಪ್ರಶಸ್ತಿ ಪಡೆಯಲಿದ್ದಾರೆ. ಇವರಿಬ್ಬರು ಅವಿಭಜಿತ ದ. ಕ. ಜಿಲ್ಲೆಯ ಅತ್ಯಂತ ಹಿರಿಯ ಸಕ್ರಿಯ ನೇಕಾರರು. ಸಂಜೀವ ಶೆಟ್ಟಿಗಾರ್ ಅವರು ಸುಮಾರು 74 ವರ್ಷಗಳಿಂದ ನಿರಂತರ ನೇಯ್ಗೆ ಮಾಡುತ್ತಿರುವುದು ಒಂದು ದಾಖಲೆ ಆಗಿದೆ. ಸೋಮಪ್ಪ ಜತ್ತನ್ನ ಅವರು ಕಳೆದ 66 ವರುಷಗಳಿಂದ ನೇಕಾರಿಕೆಯ ಕಾಯಕದಲ್ಲಿ ನಿರತರಾಗಿದ್ದಾರೆ.
ಸಂಜೀವ ಶೆಟ್ಟಿಗಾರ್ ಈಗ ಅಳಿದು ಹೋದ ಮುತ್ತು ಬಾರ್ಡರ್ ನೇಯ್ಗೆ ಯನ್ನು 2019 ರವರೆಗೆ ನೇಯುತ್ತಿದ್ದರು . ಈಗಲೂ ತಮ್ಮದೇ ವಿನ್ಯಾಸದ ಸೆರಗಿನಲ್ಲಿ ಬುಟ್ಟಾ ಇರುವ 60 ಕೌಂಟ್ ಸೀರೆಗಳನ್ನು ನೇಯುವುದರ ಜೊತೆಗೆ ಅನೇಕ ನೇಕಾರರಿಗೆ ಹಾಸು ಮತ್ತು ವಿನ್ಯಾಸ ಮಾಡುವ ಕೆಲಸ ಮಾಡುತ್ತಾ ಸಕ್ರಿಯರಾಗಿದ್ದಾರೆ. ನೇಕಾರರ ಸಂಘದ ಕಾರ್ಯ ಚಟುವಟಿಗಳನ್ನು ಅತ್ಯಂತ ದಕ್ಷತೆಯಿಂದ ನಿರ್ವಹಣೆ ಮಾಡುತ್ತಿದ್ದಾರೆ.
ಸೋಮಪ್ಪ ಜತ್ತನ್ನ ಅವರು 60 ಕೌಂಟ್ ನ ಸಣ್ಣ ಚೌಕುಳಿ ವಿನ್ಯಾಸದ ಅಪೂರ್ವ ಕಟ್ ಬಾರ್ಡರ್ ಉಡುಪಿ ಸೀರೆಗಳನ್ನು ನೇಯುತ್ತಿದ್ದಾರೆ.
ಈ ಹಿರಿಯ ಕಾಯಕ ಯೋಗಿಗಳು ಪರಿಸರ ಸ್ನೇಹಿ ಉಡುಪಿ ಸೀರೆ ನೇಕಾರಿಕೆಗೆ ನೀಡಿದ ಕೊಡುಗೆಗಾಗಿ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಅಳಿವಿನಂಚಿಗೆ ತಲುಪಿದ್ದ ಉಡುಪಿ ಸೀರೆ ನೇಕಾರಿಕೆ ಈಗ ಕದಿಕೆ ಟ್ರಸ್ಟ್ ನ ಪ್ರಯತ್ನದಿಂದ ಪುನಃಶ್ಚೇತನಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು